Monday, May 12, 2025

ಸತ್ಯ | ನ್ಯಾಯ |ಧರ್ಮ

ಮೋದಿ ವಿರುದ್ಧ ಸೋಷಿಯಲ್‌ ಮೀಡಿಯಾ ಕೆಂಡಾಮಂಡಲ: ಕದನ ವಿರಾಮ ಘೋಷಿಸಿ ಭಾರತದ ಇಮೇಜ್‌ ಹಾಳು ಮಾಡಿದ್ದಾರೆಂದು ಆಕ್ರೋಶ

ದೆಹಲಿ: ಪಾಕಿಸ್ತಾನದೊಂದಿಗೆ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದಕ್ಕಾಗಿ ಮೋದಿ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಬಿಜೆಪಿ ಸರ್ಕಾರ ಅಮೆರಿಕದ ಒತ್ತಡಕ್ಕೆ ಮಣಿದಿದೆ ಎಂದು ಟೀಕೆ ವ್ಯಕ್ತವಾಗುತ್ತಿದೆ. ಇದರಿಂದಾಗಿ ಭಾರತದ ಇಮೇಜ್ ಡ್ಯಾಮೇಜ್‌ ಆಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆರಂಭದಿಂದಲೂ ಯುದ್ಧದಲ್ಲಿ ನಮ್ಮದೇ ಮೇಲುಗೈ ಇತ್ತು, ಹೀಗಾಗಿ ಕದನ ವಿರಾಮಕ್ಕೆ ಒಪ್ಪಿಕೊಳ್ಳುವ ಅಗತ್ಯವಿರಲಿಲ್ಲ ಎಂದು ಜನರು ಪ್ರತಿಭಟಿಸುತ್ತಿದ್ದಾರೆ.

ಕದನ ವಿರಾಮಕ್ಕೆ ಇದು ಸರಿಯಾದ ಸಮಯವಲ್ಲ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಈ ನಿರ್ಧಾರಕ್ಕೆ ಪ್ರೇರಣೆ ನೀಡಿದವರು ಯಾರು ಮತ್ತು ಅಮೆರಿಕದ ಮಧ್ಯಸ್ಥಿಕೆಯನ್ನು ಸ್ವೀಕರಿಸಿ ಅದಕ್ಕೆ ತಲೆಬಾಗುವ ಅವಶ್ಯಕತೆ ಏನಿತ್ತು ಎನ್ನುವ ಪ್ರಶ್ನೆಗಳ ಸುರಿಮಳೆಯನ್ನೇ ಸೋಷಿಯಲ್‌ ಮೀಡಿಯಾಗಳಲ್ಲಿ ಸುರಿಸಲಾಗುತ್ತಿದೆ.

ಅಮೆರಿಕ ಅಧ್ಯಕ್ಷ ಟ್ರಂಪ್ ಮಧ್ಯಸ್ಥಿಕೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿದ್ದು ಎಲ್ಲರಿಗೂ ತಿಳಿದಿರುವ ವಿಷಯ. ಶನಿವಾರ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಇದನ್ನು ಘೋಷಿಸಿದ ನಂತರ, ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಕೂಡ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ಹೇಳಿದರು. ತಕ್ಷಣವೇ, ಈ ವಿಷಯವು ದೇಶಾದ್ಯಂತ ಸಾಮಾಜಿಕ ಮಾಧ್ಯಮಗಳಲ್ಲಿ ಬಿಸಿಬಿಸಿ ಚರ್ಚೆಯ ವಿಷಯವಾಯಿತು.

ಪ್ರಧಾನಿ ಮೋದಿ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ನೆಟಿಜನ್ ಒಬ್ಬರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. “ಪ್ರಧಾನಿ ಮೋದಿ ತಮ್ಮ ಜೀವನದ ಅತಿ ದೊಡ್ಡ ತಪ್ಪನ್ನು ಮಾಡಿದ್ದಾರೆ. ಅವರು ಜನರ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ನಾನು ಇನ್ನು ಮುಂದೆ ಅವರಿಗೆ ಮತ ಹಾಕುವುದಿಲ್ಲ” ಎಂದು ಅವರು ಹೇಳಿದ್ದಾರೆ.

‘ಈ ಕದನ ವಿರಾಮವು ಶಾಶ್ವತ ಶಾಂತಿಗೆ ಕೊಡುಗೆ ನೀಡುತ್ತದೆಯೇ? ಪಾಕಿಸ್ತಾನ ಮತ್ತೆ ಒಳನುಸುಳುವಿಕೆಯನ್ನು ಪ್ರೋತ್ಸಾಹಿಸುವುದಿಲ್ಲ ಎನ್ನುವುದಕ್ಕೆ ಗ್ಯಾರಂಟಿ ಏನಿದೆ? ಇನ್ನು ಮುಂದೆ ಅಮಾಯಕ ಜನರ ಮೇಲೆ ದಾಳಿಯಾಗುವುದಿಲ್ಲ ಎಂದು ಮೋದಿ ಗ್ಯಾರಂಟಿ ಕೊಡಬಲ್ಲರೇ? ಪಹಲ್ಗಾಮ್‌ ರೀತಿಯ ಘಟನೆಗಳು ಮುಂದೆ ನಡೆಯುವುದಿಲ್ಲ ಎನ್ನುವ ಕುರಿತು ಸರ್ಕಾರ ಖಾತರಿ ನೀಡಬಲ್ಲದೇ? ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಜನರಿಗೆ ಇದರಿಂದ ಸಮಾಧಾನ ಸಿಗುತ್ತದೆಯೇ? ಇನ್ನು ಮುಂದೆ ಕಣಿವೆ ಪ್ರದೇಶದಲ್ಲಿ ಪ್ರವಾಸೋದ್ಯಮ ಸುರಕ್ಷಿತವಾಗಿರಲಿದೆಯೇ? ಇದೆಲ್ಲ ಪ್ರಶ್ನೆಗಳಿಗೆ ಉತ್ತರ ಹೌದು ಎಂದಾದಲ್ಲಿ ಮಾತ್ರ ಈ ಶಾಂತಿ ಮಾತುಕತೆಗೆ ಅರ್ಥ ಸಿಗಲಿದೆ ಎಂದು ಸಾಮಾಜಿಕ ಜಾಲತಾಣ ಬಳಕೆದಾರರೊಬ್ಬರು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page