Home ದೇಶ ತೇಲ್ತುಂಬ್ಡೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ NIA

ತೇಲ್ತುಂಬ್ಡೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ NIA

0

ಹೊಸದಿಲ್ಲಿ : 2018ರ ಭೀಮಾ ಕೋರೆಗಾಂವ್‌ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿ ಬಂಧಿತವಾಗಿದ್ದ ಆನಂದ್‌ ತೇಲ್ತುಂಬ್ಡೆ ಅವರ ಜಾಮೀನು ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(NIA) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

2018ರ ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣದಲ್ಲಿ ಆರೋಪಿತ ಪಾತ್ರಕ್ಕಾಗಿ 2020ರಿಂದ ತಲೋಜಾ ಕೇಂದ್ರ ಕಾರಾಗೃಹದಲ್ಲಿ ಪ್ರಸ್ತುತ ಬಂಧಿತರಾಗಿರುವ ದಲಿತ ಹಕ್ಕುಗಳ ಹೋರಾಟಗಾರ ಮತ್ತು ವಿದ್ವಾಂಸ ಆನಂದ್ ತೇಲ್ತುಂಬ್ಡೆ ಅವರಿಗೆ ಬಾಂಬೆ ಹೈಕೋರ್ಟ್ ನವೆಂಬರ್‌ 18ರಂದು ಜಾಮೀನು ಮಂಜೂರು ಮಾಡಿತ್ತು.

ಈ ಹಿನ್ನಲೆಯಲ್ಲಿ, ಬಾಂಬೆ ಹೈಕೋರ್ಟ್‌ ಆನಂದ್‌ ತೇಲ್ತುಂಬ್ಡೆಯವರಿಗೆ ನೀಡಿದ್ದ ಜಾಮೀನಿನ ಆದೇಶವನ್ನು ಪ್ರಶ್ನಿಸಿ ಇಂದು ಎನ್‌ಐಎ ಸುಪ್ರೀಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಅವರು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾ. ಡಿ.ವೈ ಚಂದ್ರಚೂಡ್‌ ಅವರೆದುರು ಮಂಗಳವಾರದಂದು ಪ್ರಕರಣವನ್ನು ಪ್ರಸ್ತಾಪಿಸಿದ್ದು, ಈ ಕುರಿತು ಸಿಐಜೆ ನವೆಂಬರ್‌ 25ರಂದು ಪ್ರಕರಣ ವಿಚಾರಣೆಗೆ ಸಮ್ಮತಿ ನೀಡಿದ್ದಾರೆ.

You cannot copy content of this page

Exit mobile version