ಚನ್ನಪಟ್ಟಣಕ್ಕೆ ಕಗ್ಗಂಟಾಗಿದ್ದ ಮೈತ್ರಿ ಅಭ್ಯರ್ಥಿ ಆಯ್ಕೆಯನ್ನು ರಾಜ್ಯ NDA ನಾಯಕರ ಮಹತ್ವದ ಸಭೆಯಲ್ಲಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ. ಅದರಂತೆ ಎಲ್ಲಾ ರೀತಿಯಲ್ಲೂ ಅಳೆದು ತೂಗಿ, ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮಗ ನಿಖಿಲ್ ಅವರನ್ನು ಕಣಕ್ಕಿಳಿಸಲು ಮೈತ್ರಿ ನಾಯಕರು ಸಮ್ಮತಿ ಸೂಚಿಸಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ನಾಯಕರು ಸೇರಿ ಈ ಸಂಬಂಧ ಅಂತಿಮ ಚರ್ಚೆಯನ್ನು ನಡೆಸಿದರು.
ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರನ್ನು ಇವತ್ತು ನಮ್ಮ ಅಭ್ಯರ್ಥಿ ಎಂದು ಘೋಷಿಸುತ್ತಿದ್ದೇವೆ. ನಿಖಿಲ್ ಆಯ್ಕೆಯು ಅವರು ಗೆಲ್ಲುವ ಆತ್ಮವಿಶ್ವಾಸ ತೋರುತ್ತದೆ ಎಂದು ಹೇಳಿದ್ದಾರೆ.
ಅಷ್ಟೇ ಅಲ್ಲದೇ ಪ್ರಧಾನಿ ಮೋದಿ ಅವರ ಆಶೀರ್ವಾದವಿದೆ. ಮೋದಿ ಅವರ ಬೆಂಬಲದಿಂದ ಕುಮಾರಸ್ವಾಮಿ, ಅಶೋಕ್ ಎಲ್ಲರೂ ಒಟ್ಟಾಗಿ ಸೇರಿದ್ದೇವೆ. ನೂರಕ್ಕೆ ನೂರು ಚುನಾವಣೆಯಲ್ಲಿ ನಿಂತು ಗೆಲುವು ಸಾಧಿಸಲಿದ್ದಾರೆ ಎಂದರು.