Home ಬ್ರೇಕಿಂಗ್ ಸುದ್ದಿ ನಿಷೇಧಾಜ್ಞೆ ಜಾರಿಯ ಬೆನ್ನಲ್ಲೇ ಶಾಲಾ ಕಾಲೇಜಿಗೆ ರಜೆ

ನಿಷೇಧಾಜ್ಞೆ ಜಾರಿಯ ಬೆನ್ನಲ್ಲೇ ಶಾಲಾ ಕಾಲೇಜಿಗೆ ರಜೆ

0

ಶಿವಮೊಗ್ಗ ನಗರದಲ್ಲಿ ಟಿಪ್ಪು-ಸಾವರ್ಕರ್ ಫ್ಲೆಕ್ಸ್ ವಿವಾದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತ 144 ಸೆಕ್ಷನ್ ಜಾರಿ ಮಾಡಿದೆ. ಜಾರಿಯ ನಂತರ ಶಿವಮೊಗ್ಗದಲ್ಲಿ ಇಬ್ಬರಿಗೆ ಚೂರಿ ಇರಿತವಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಹಿಂಸಾಚಾರ ಬುಗಿಲೆದ್ದಿದೆ.

ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಗಾಂಧಿ ಬಜಾರಿನಲ್ಲಿ ಪ್ರೇಮ್ ಸಿಂಗ್ ಎಂಬುವವರಿಗೆ ಚಾಕುವಿನಿಂದ ಇರಿದ ಮೊದಲ ಪ್ರಕರಣದ ಬೆನ್ನಲ್ಲೇ ನಗರದ ಅಶೋಕ ನಗರದಲ್ಲಿ ಪ್ರವೀಣ್ ಕುಮಾರ್ ಎಂಬುವವರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸಧ್ಯದ ಶಿವಮೊಗ್ಗ ನಗರದ ಪರಿಸ್ಥಿತಿ ಅತಿ ಸೂಕ್ಷ್ಮ ಸ್ಥಿತಿಯಲ್ಲಿದ್ದು 144 ಸೆಕ್ಷನ್ ಮುಂದುವರೆಯುವ ಸಾಧ್ಯತೆಯಿದೆ. ಶಿವಮೊಗ್ಗದ ಜೊತೆಗೆ ಭದ್ರಾವತಿಯಲ್ಲೂ ನಿಷೇಧಾಜ್ಞೆ ಜಾರಿಯಾಗಿದ್ದು ಮಂಗಳವಾರ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

You cannot copy content of this page

Exit mobile version