Monday, June 30, 2025

ಸತ್ಯ | ನ್ಯಾಯ |ಧರ್ಮ

ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ ನಿತೀಶ್, ತೇಜಸ್ವಿ

ಹೊಸದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ (ಜೂನ್ 5) ಸಂಜೆ ನಡೆಯಲಿರುವ ಎನ್ ಡಿಎ ಮತ್ತು ಮೈತ್ರಿಕೂಟಗಳ ಸಭೆಗಳಲ್ಲಿ ಭಾಗವಹಿಸಲು ಹಲವು ರಾಜ್ಯಗಳ ನಾಯಕರು ತೆರಳಿದ್ದಾರೆ. ಆಯಾ ಮೈತ್ರಿಕೂಟದ ಸಭೆಯಲ್ಲಿ ಆ ಮೈತ್ರಿಕೂಟದ ನಾಯಕರು ಭಾಗವಹಿಸುತ್ತಾರೆ.

ಆದರೆ ಈ ನಡುವೆ ಬಿಹಾರದಲ್ಲಿ ವಿಚಿತ್ರ ಬೆಳವಣಿಗೆಯೊಂದು ನಡೆದಿದೆ.

ಎನ್‌ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲಿರುವ ಸಿಎಂ ನಿತೀಶ್‌ಕುಮಾರ್ ಮತ್ತು ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿರುವ ಆರ್‌ಜೆಡಿ ನಾಯಕ ತೇಜಸ್ವಿಯಾದವ್ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿರುವುದು ವ್ಯಾಪಕ ಚರ್ಚೆಯಾಗುತ್ತಿದೆ.

ಈ ಬೆಳವಣಿಗೆಯೊಂದಿಗೆ ಯಾರನ್ನು ಯಾವ ಮೈತ್ರಿಯತ್ತ ಕರೆದೊಯ್ಯುತ್ತಾರೆ ಎಂಬ ಚರ್ಚೆ ಶುರುವಾಗಿದೆ. ಆದರೆ ಜೆಡಿಯು ನಾಯಕ ಕೆಸಿ ತ್ಯಾಗಿ ಅವರು ಎನ್‌ಡಿಎಯಲ್ಲಿ ಮುಂದುವರಿಯುವುದಾಗಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಲು ತೆರಳಿರುವುದಾಗಿ ಆರ್‌ಜೆಡಿ ನಾಯಕ ತೇಜಸ್ವಿಯಾದವ್ ಸ್ಪಷ್ಟಪಡಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page