Wednesday, February 4, 2026

ಸತ್ಯ | ನ್ಯಾಯ |ಧರ್ಮ

ವೈದ್ಯೆಯ ಹಿಜಾಬ್ ಎಳೆದ ನಿತೀಶ್ – ಮತ್ತೊಂದು ವಿವಾದದಲ್ಲಿ ಬಿಹಾರ ಸಿಎಂ; ನೀಚ ಕೃತ್ಯ ಎಂದ ಕಾಂಗ್ರೆಸ್

ಪಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಪಟ್ನಾದಲ್ಲಿ ನಡೆದ ಒಂದು ಕಾರ್ಯಕ್ರಮದಲ್ಲಿ ಅವರು ಓರ್ವ ಮಹಿಳಾ ವೈದ್ಯೆಯ ಹಿಜಾಬ್ ಅನ್ನು ತೆಗೆದುಹಾಕಿ, ಅವರ ಮುಖವನ್ನು ನೋಡಿರುವುದಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ.

ಆಯುಷ್ ವೈದ್ಯರಿಗೆ ಪ್ರಮಾಣಪತ್ರಗಳನ್ನು ವಿತರಿಸುವ ಸಮಾರಂಭದಲ್ಲಿ ಸೋಮವಾರ ಈ ಘಟನೆ ನಡೆದಿದೆ. ಆ ಸಮಯದಲ್ಲಿ, ಅವರ ಹಿಂದಿದ್ದ ಕೆಲವರು ನಗುತ್ತಿರುವುದು ವೀಡಿಯೊದಲ್ಲಿ ಕೇಳಿಸಿತು. ಉಪಮುಖ್ಯಮಂತ್ರಿ ಸಮ್ರಾಟ್ ಚೌಧರಿ ಅವರು ನಿತೀಶ್ ಕುಮಾರ್ ಅವರನ್ನು ತಡೆಯಲು ಪ್ರಯತ್ನಿಸುತ್ತಿರುವುದು ವೀಡಿಯೊದಲ್ಲಿ ಕಂಡುಬಂದಿದೆ.

ಈ ಘಟನೆಗೆ ಕಾಂಗ್ರೆಸ್ ಮತ್ತು ಆರ್ ಜೆಡಿ ಪಕ್ಷಗಳು ತೀವ್ರವಾಗಿ ಪ್ರತಿಕ್ರಿಯಿಸಿವೆ. ಆರ್ ಜೆಡಿ ವಕ್ತಾರರಾದ ಎಜಾಜ್ ಅಹ್ಮದ್ ಅವರು ಪ್ರತಿಕ್ರಿಯಿಸಿ, “ಮಹಿಳೆಯರ ಬಗ್ಗೆ ಬಿಜೆಪಿ-ಜೆಡಿಯು ಮೈತ್ರಿಕೂಟದ ಮನೋಭಾವ ಸ್ಪಷ್ಟವಾಗುತ್ತಿದೆ,” ಎಂದರು. ಈ ಕೃತಿಯು ಒಬ್ಬ ವ್ಯಕ್ತಿಯ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾತಂತ್ರ್ಯದೊಂದಿಗೆ ಬದುಕುವ ಹಕ್ಕನ್ನು ಕಸಿದುಕೊಂಡಂತಿದೆ ಎಂದು ಅವರು ಆರೋಪಿಸಿದರು. ‌

ಕಾಂಗ್ರೆಸ್ ಪಕ್ಷವು ನಿತೀಶ್ ಕುಮಾರ್ ರಾಜೀನಾಮೆ ನೀಡಬೇಕೆಂದು ಬೇಡಿಕೆ ಇಟ್ಟಿದೆ. ಆರ್ ಜೆಡಿ ಕೂಡ ನಿತೀಶ್ ಕುಮಾರ್ ಅವರ ಮಾನಸಿಕ ಸ್ಥಿತಿಯ ಕುರಿತು ಪ್ರಶ್ನೆ ಎತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page