Sunday, April 28, 2024

ಸತ್ಯ | ನ್ಯಾಯ |ಧರ್ಮ

ಬಿಜೆಪಿಯೊಳಗೆ ಭಿನ್ನಮತದ ತಳಮಳ | ಎಲ್ಲರೂ ನಮ್ಮವರೇ ಯಾರೂ ಪಕ್ಷ ಬಿಡುವುದಿಲ್ಲ: ಶ್ರೀರಾಮುಲು

ಚಿತ್ರದುರ್ಗ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳನ್ನು ಘೋಷಿಸಿದ ಕಾರಣ ಬಿಜೆಪಿಗೆ ಸೋಲಾಯಿತು. ಆದರೆ ಲೋಕಸಭಾ ಚುನಾವಣೆಯಲ್ಲಿ ಅದೆಲ್ಲ ನಡೆಯುವುದಿಲ್ಲ, ನಾವು ಖಂಡಿತವಾಗಿಯೂ ಗೆಲ್ಲಲಿದ್ದೇವೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಬಿ ಶ್ರೀರಾಮುಲು ಭವಿಷ್ಯ ನುಡಿದರು.

ಕಾಂಗ್ರೆಸ್‌ ನಾಯಕರು ಬಿಜೆಪಿ ಮತ್ತು ಜೆಡಿಎಸ್‌ ಶಾಸಕರನ್ನು ಸೆಳೆದು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅದೆಲ್ಲ ಕನಸಿನ ಮಾತು, ನಾವೆಲ್ಲ ಪಕ್ಷದಲ್ಲಿ ಒಗ್ಗಟ್ಟಾಗಿದ್ದೇವೆ ಎಂದು ಅವರು ತಿಳಿಸಿದರು. ಈ ಕುರಿತು ಡಿಕೆ ಶಿವಕುಮಾರ್‌ ಹಗಲುಗನಸು ಕಾಣುತ್ತಿದ್ದು, ಇನ್ನು ನಾಲ್ಕೈದು ತಿಂಗಳಲ್ಲಿ ಅವರ ಬಂಡವಾಳ ಜನರಿಗೆ ತಿಳಿಯಲಿದೆ ಎಂದರು.

ಪಕ್ಷದಲ್ಲಿ ಒಗ್ಗಟ್ಟು ಮೂಡಿಸಲು ಬಿ.ವೈ. ವಿಜಯೇಂದ್ರ ಅವರಿಗೆಗೆ ಹೊಣೆ ನೀಡಲಾಗಿದೆ. ಸಿ.ಟಿ. ರವಿ, ಯತ್ನಾಳ್‌, ಸೋಮಣ್ಣ ಎಲ್ಲರೂ ಒಂದೇ ಕುಟುಂಬ. ವಿ.ಸೋಮಣ್ಣ ಪಕ್ಷ ಬಿಟ್ಟು ಹೋಗುವ ವ್ಯಕ್ತಿಯಲ್ಲ. ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯವಿದ್ದರೆ ಸರಿ ಮಾಡುತ್ತೇವೆ. ನಾನು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಅವರು ನುಡಿದರು.

ಬಿ.ವೈ. ವಿಜಯೇಂದ್ರ ಅವರಿಗೆ ಪಕ್ಷ ಕಟ್ಟುವ ವಿಷಯದಲ್ಲಿ ಮಾರ್ಗದರ್ಶನ ಮಾಡಿ ಪಕ್ಷವನ್ನು ಬಲಪಡಿಸುತ್ತೇವೆ ಎಂದು ಅವರು ವಿಶ್ವಾಸದಿಂದ ನುಡಿದರು.

Related Articles

ಇತ್ತೀಚಿನ ಸುದ್ದಿಗಳು