Home ರಾಜಕೀಯ ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಬಹಿರಂಗ ಚರ್ಚೆ ಬೇಡ: ಜೆಡಿಎಸ್ ಸದಸ್ಯರಿಗೆ ನಿಖಿಲ್ ಕುಮಾರಸ್ವಾಮಿ ಸೂಚನೆ

ಬಿಜೆಪಿ ಜೊತೆಗಿನ ಮೈತ್ರಿ ಬಗ್ಗೆ ಬಹಿರಂಗ ಚರ್ಚೆ ಬೇಡ: ಜೆಡಿಎಸ್ ಸದಸ್ಯರಿಗೆ ನಿಖಿಲ್ ಕುಮಾರಸ್ವಾಮಿ ಸೂಚನೆ

0

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕುರಿತಾದ ಯಾವುದೇ ಭಿನ್ನಾಭಿಪ್ರಾಯಗಳನ್ನು ಬಹಿರಂಗವಾಗಿ ಚರ್ಚಿಸದಂತೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಬುಧವಾರ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೈತ್ರಿ ಪಕ್ಷಗಳ ನಡುವಿನ ಅಸಮಾಧಾನಗಳನ್ನು ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಿ ಬಗೆಹರಿಸಿಕೊಳ್ಳಬೇಕೇ ಹೊರತು ರಸ್ತೆಗಳಲ್ಲಿ ಅಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಬಿಜೆಪಿ ಅಥವಾ ಜೆಡಿಎಸ್ ಮಾತ್ರವಲ್ಲ, ಎನ್‌ಡಿಎ (NDA) ಒಕ್ಕೂಟವು 140 ರಿಂದ 150 ಸ್ಥಾನಗಳನ್ನು ಗೆಲ್ಲಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಮೈತ್ರಿಗೆ ಬಿಜೆಪಿಯ ಕೇಂದ್ರ ನಾಯಕತ್ವದ ಅನುಮೋದನೆ ಇದೆ ಎಂಬುದನ್ನು ನೆನಪಿಸಿದ ನಿಖಿಲ್, “ಕೇವಲ ಪ್ರಚಾರಕ್ಕಾಗಿ ಎರಡು ಜಿಲ್ಲೆಗಳ ಸ್ಥಳೀಯ ನಾಯಕರು ಈ ಮೈತ್ರಿ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡುತ್ತಿದ್ದಾರೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

You cannot copy content of this page

Exit mobile version