Sunday, June 16, 2024

ಸತ್ಯ | ನ್ಯಾಯ |ಧರ್ಮ

ʼಮಹಿಳಾ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ..!ʼ – ಬಿಜೆಪಿ ಪ್ರತಿಭಟನೆ

ಬೆಂಗಳೂರು : ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಭ್ರೂಣಹತ್ಯೆ ತಡೆಗಟ್ಟುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲಗೊಂಡಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದು ಬೆಂಗಳೂರಿನಲ್ಲಿ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟಣೆ ನಡೆಸಿದ್ದಾರೆ.

ಮಣಿಪುರದಲ್ಲಿ ಮಹಿಳೆಯರನ್ನು ಬೆತ್ತಲೆಯಾಗಿ ಮೆರೆವಣಿಗೆ ಮಾಡಿಸಿದಾಗ ದೌರ್ಜನ್ಯ ಅನ್ನಿಸಿಲ್ಲದ್ದೆ ಸದ್ದು ಮಾಡದಿದ್ದ ಮೋರ್ಚಾಗಳು, ಕುಸ್ತಿಪಟುಗಳ ಮೇಲೆ ಬಿಜಿಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಲೈಂಗಿಕ ಕಿರುಕುಳ ಎಸಗಿದ್ದು ಮಹಿಳಾ ದೌರ್ಜನ್ಯ ಎಂದು ಪ್ರತಿಭಟನೆ ಮಾಡದ ಬಿಜೆಪಿ ಕಾರ್ಯಕರ್ತರು ಇಂದು ಬೆಂಗಳೂರಿನಲ್ಲಿ ಮಹಿಳೆಯರಿಗೆ ರಕ್ಷಣೆ ಕೊಡುವಲ್ಲಿ ಹಾಗೆಯೇ ಭ್ರೂಣಹತ್ಯೆ ತಡೆಗಟ್ಟುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಹಿಳಾ ಮೋರ್ಚಾ ವತಿಯಿಂದ ಕಾಂಗ್ರೆಸ್ನ ವಿರುದ್ದ ಪ್ರತಿಭಟನೆ ಮಾಡಿದ್ದಾರೆ.

ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸದಾನಂದಗೌಡರು, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷರಾದ ಗೀತಾ ವಿವೇಕಾನಂದ್ ಮತ್ತು ಪ್ರಮುಖ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Related Articles

ಇತ್ತೀಚಿನ ಸುದ್ದಿಗಳು