Home ಇನ್ನಷ್ಟು ಕೋರ್ಟು - ಕಾನೂನು ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

ಮಾನನಷ್ಟ ಮೊಕದ್ದಮೆ: ರಾಹುಲ್‌ ಗಾಂಧಿ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ

0

ರಾಹುಲ್ ಗಾಂಧಿ | ಹಿರಿಯ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ಪ್ರಮುಖ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ಹಿನ್ನಡೆ ಅನುಭವಿಸಿದ್ದಾರೆ. 2018ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಜಾರ್ಖಂಡ್‌ನ ಚೈಬಾಸಾದಲ್ಲಿರುವ ಸಂಸದ-ಶಾಸಕರ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಜಾಮೀನು ರಹಿತ ವಾರಂಟ್ ಹೊರಡಿಸಿದೆ.

ರಾಹುಲ್ ಅವರ ವಕೀಲರು ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು.

2018ರಲ್ಲಿ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ರಾಹುಲ್ ಗಾಂಧಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ಅಮಿತ್ ಶಾ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದಾರೆ ಎಂದು ರಾಹುಲ್ ಆರೋಪಿಸಿದ್ದರು.

ಬಿಜೆಪಿ ನಾಯಕ ಪ್ರತಾಪ್ ಕಟಿಯಾರ್ ಅವರು ರಾಹುಲ್‌ ಗಾಂಧಿಯವರ ಹೇಳಿಕೆಅವಮಾನಕರ ಮತ್ತು ಖ್ಯಾತಿಗೆ ಹಾನಿಯನ್ನುಂಟುಮಾಡುವಂತಿವೆ ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಜುಲೈ 9, 2018 ರಂದು ಚೈಬಾಸಾದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಯಿತು.

ನಂತರ, ಜಾರ್ಖಂಡ್ ಹೈಕೋರ್ಟ್‌ ಆದೇಶದಂತೆ, ಫೆಬ್ರವರಿ 2020ರಲ್ಲಿ ಪ್ರಕರಣವನ್ನು ರಾಂಚಿಯ ಸಂಸದ-ಶಾಸಕರ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ನಂತರ ಅಲ್ಲಿಂದ ಪ್ರಕರಣವನ್ನು ಚೈಬಾಸಾ ಸಂಸದ-ಶಾಸಕರ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು.

ಅಲ್ಲಿ ಅರ್ಜಿಯನ್ನು ಪರಿಗಣಿಸಿದ ಮ್ಯಾಜಿಸ್ಟ್ರೇಟ್ ರಾಹುಲ್‌ ಗಾಂಧಿಯವರಿಗೆ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದರು. ಆದರೆ, ರಾಹುಲ್ ಪದೇ ಪದೇ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದರೊಂದಿಗೆ, ನ್ಯಾಯಾಲಯವು ಆರಂಭದಲ್ಲಿ ಜಾಮೀನು ನೀಡಬಹುದಾದ ವಾರಂಟ್ ಹೊರಡಿಸಿತ್ತು. ನಂತರ ರಾಹುಲ್ ವಾರಂಟ್‌ಗೆ ತಡೆ ನೀಡುವಂತೆ ಕೋರಿ ಜಾರ್ಖಂಡ್ ಹೈಕೋರ್ಟ್‌ನ ಮೊರೆ ಹೋದರು.

ಆದರೆ ನ್ಯಾಯಾಲಯವು ಮಾರ್ಚ್ 20, 2024ರಂದು ಅರ್ಜಿಯನ್ನು ವಜಾಗೊಳಿಸಿತು. ಇದರೊಂದಿಗೆ, ರಾಹುಲ್ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ಕೋರಿ ಅರ್ಜಿಯನ್ನು ಸಲ್ಲಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಚೈಬಾಸಾ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತು.

ಇದೀಗ ಸಂಸದ-ಶಾಸಕದ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಈ ನಿಟ್ಟಿನಲ್ಲಿ, ಜೂನ್ 26ರಂದು ರಾಹುಲ್ ಖುದ್ದಾಗಿ ನ್ಯಾಯಾಲಯದ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯ ಸ್ಪಷ್ಟ ಆದೇಶಗವನ್ನು ಹೊರಡಿಸಿದೆ.

You cannot copy content of this page

Exit mobile version