Home ರಾಜಕೀಯ ಯುದ್ಧದ ಸಂಪೂರ್ಣ ಕ್ರೆಡಿಟ್ ಸಿಗಬೇಕಾದದು ಭಾರತೀಯ ಸೇನೆಗೇ ಹೊರತು ಯಾವುದೇ ಪಕ್ಷಕ್ಕಲ್ಲ : ಸಿಎಂ ಸಿದ್ದರಾಮಯ್ಯ

ಯುದ್ಧದ ಸಂಪೂರ್ಣ ಕ್ರೆಡಿಟ್ ಸಿಗಬೇಕಾದದು ಭಾರತೀಯ ಸೇನೆಗೇ ಹೊರತು ಯಾವುದೇ ಪಕ್ಷಕ್ಕಲ್ಲ : ಸಿಎಂ ಸಿದ್ದರಾಮಯ್ಯ

0

ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧದ ಕ್ರೆಡಿಟ್ ನ್ನು ಯಾವುದೇ ಪಕ್ಷಗಳು ತೆಗೆದುಕೊಳ್ಳಬಾರದು. ಯುದ್ಧದ ಸಂಪೂರ್ಣ ಕ್ರೆಡಿಟ್ ಸಿಗಬೇಕಾದದು ಸೇನೆಗೇ ಹೊರತು ಬೇರಾರಿಗೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಮೈಸೂರಿನ ಹೆಚ್.ಡಿ.ಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು ಎರಡೂ ದೇಶಗಳ ಡಿಜಿಎಂ ಸಭೆ ಇದೆ. ಸಭೆಯಲ್ಲಿ ಏನು ನಿರ್ಧಾರ ಬರುವುದೋ ಕಾದು ನೋಡೋಣ. ಅಲ್ಲಿಯವರೆಗೆ ಏನೂ ಹೇಳಲಾಗದು ಎಂದು ಹೇಳಿದ್ದಾರೆ.

1971ರ ಯುದ್ಧಕ್ಕೂ ಇವತ್ತಿನ ಸಂದರ್ಭಕ್ಕೂ ನಾನು ಹೋಲಿಕೆ ಮಾಡಿ ಮಾತನಾಡುವುದಿಲ್ಲ. ಅವತ್ತಿನ ಪರಿಸ್ಥಿತಿಗಳೇ ಬೇರೆ, ಇವತ್ತಿನ ಪರಿಸ್ಥಿತಿಗಳೇ ಬೇರೆ. ಟ್ರಪ್ ಟ್ವಿಟ್ ಬಗ್ಗೆಯಾಗಲಿ, ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಬಗ್ಗೆಯಾಲಿ ನಾನು ಮಾತನಾಡುವುದಿಲ್ಲ. ನನ್ನ ಮಾತನ್ನ ಸೀಜ್ ಫೈರಿಂಗ್ ಅಷ್ಟೇ ಸಿಮಿತ ಗೊಳಿಸುತ್ತೇನೆ‌ ಎಂದರು.

ಕದನ ವಿರಾಮ ಘೋಷಣೆಗೂ ಮುನ್ನ ಸರ್ವ ಪಕ್ಷ ಸಭೆ ಕರೆಯಬೇಕಿತ್ತು. ವಿಶೇಷ ಅಧಿವೇಶನ ಕರೆಯಬೇಕಿತ್ತು. ಸರ್ವಪಕ್ಷ ಸಭೆಯಲ್ಲಿ ಚರ್ಚೆಮಾಡಿ ನಿರ್ಧಾರ ಪ್ರಕಟಿಸಬಹುದಿತ್ತು ಆದರೆ ಅದನ್ನು ಮಾಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿದ್ದರಾಮಯ್ಯ, ರಾಜ್ಯದಲ್ಲಿನ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನ ಹೊರಗೆ ಕಳುಹಿಸಿದ್ದೇವೆ‌ ಮೈಸೂರಿನಲ್ಲಿ ಮೂರು ಮಕ್ಕಳು ಮಾತ್ರ ಇದ್ದಾರೆ. ಅವರನ್ನ ಹೊರಗೆ ಕಳುಹಿಸಲು ತಾಂತ್ರಿಕ ಸಮಸ್ಯೆ ಇವೆ‌ ಗಂಡ ಪಾಕಿಸ್ತಾನಿ, ಹೆಂಡತಿ ಮೈಸೂರಿನವಳು ಹೀಗಾಗಿ ಮಕ್ಕಳ ವಿಚಾರದಲ್ಲಿ ತಾಂತ್ರಿಕ ಸಮಸ್ಯೆ ಇದೆ. ಹೀಗಾಗಿ ಮಕ್ಕಳು ಮಾತ್ರ ಇಲ್ಲೆ ಇದ್ದಾರೆ ಎಂದು ಹೇಳಿದರು.

You cannot copy content of this page

Exit mobile version