Sunday, June 22, 2025

ಸತ್ಯ | ನ್ಯಾಯ |ಧರ್ಮ

ಮಗನ ಬಂಧನ ಬೆನ್ನಲ್ಲೆ ತಾಯಿಗೂ ನೋಟಿಸ್‌: ನಾಳೆ ವಿಚಾರಣೆಗೆ ಹಾಜರಾಗಲು ಭವಾನಿಗೆ SIT ಸೂಚನೆ

ಹಾಸನ: ಇಂದು ಬೆಳಗಿ ಜಾವ ಜರ್ಮನಿಯಿಂದ ಆಗಮಿಸಿದ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಂಧನದ ಬೆನ್ನಲ್ಲೆ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಎಸ್‌ಐಟಿ ತಂಡ ಮತ್ತೊಂದು ನೋಟೀಸ್‌ ನೀಡಿದೆ.

ಕೆ.ಆರ್‌. ನಗರ ತಾಲ್ಲೂಕಿನ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 1ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಎಸ್‌ಐಟಿ ತಂಡ, ಭವಾನಿ ಅವರಿಗೆ ನೋಟಿಸ್‌ ಜಾರಿಗೆ ಮಾಡಿದೆ. ಮೊದಲು ನೀಡಿದ್ದ ನೋಟಿಸ್‌ಗೆ ಪ್ರತಿಕ್ರಿಯಿಸಿದ್ದ ಅವರು ತನಿಖೆಗೆ ಅವಶ್ಯವಿದ್ದರೆ ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಇರುವುದಾಗಿ ಭವಾನಿ ತಿಳಿಸಿದ್ದರು. ಆ

‘ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ಒಳೆಗೆ ವಿಚಾರಣೆಗೆ ಬರುತ್ತೇವೆ. ಆ ಸಂದರ್ಭದಲ್ಲಿ ಮನೆಯಲ್ಲಿ ಖುದ್ದು ಹಾಜರಿರಬೇಕು’ ಎಂದು ಎಸ್ಐಟಿ ಇನ್‌ಸ್ಪೆಕ್ಟರ್ ಹೇಮಂತ್ ಕುಮಾರ್ ನೀಡಿರುವ ನೋಟಿಸ್‌ನಲ್ಲಿ ಸೂಚನೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಭವಾನಿ ರೇವಣ್ಣ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಯಲಿದೆ. ಈ ಮಧ್ಯೆ ಎಸ್‌ಐಟಿ ಖುದ್ದು ಹಾಜರಿರುವಂತೆ ನೋಟಿಸ್‌ ನೀಡಿದ್ದು, ನಿರೀಕ್ಷಣಾ ಜಾಮೀನು ಸಿಗದಿದ್ದರೆ ಬಂಧನವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page