Home ಬ್ರೇಕಿಂಗ್ ಸುದ್ದಿ ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಶಾಕ್, ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸಲು ಸೂಚನೆ

ಕಾವೇರಿ ವಿವಾದ : ಕರ್ನಾಟಕಕ್ಕೆ ಮತ್ತೆ ಶಾಕ್, ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸಲು ಸೂಚನೆ

0

ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ CWRC ಸೂಚನೆ ನೀಡಿದೆ. ದೆಹಲಿಯಲ್ಲಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಸಭೆ ಕರೆದಿದ್ದು, ಕರ್ನಾಟಕದ ಅಧಿಕಾರಿಗಳು ಭಾಗಿ ಆಗಿರುವ ಈ ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ನೀರು ಹರಿಸುವಂತೆ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ‌.

ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಈ ಹಿಂದೆ ಆದೇಶಿಸಿದಂತೆ, ಅಕ್ಟೋಬರ್ ಅಂತ್ಯದ ವರೆಗೂ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶಿಸಿತ್ತು. ಈ ಬಗ್ಗೆ ರಾಜ್ಯಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾದರೂ ಸುಪ್ರೀಂಕೋರ್ಟಿನ ಕೆಂಗಣ್ಣಿಗೆ ಗುರಿ ಆಗುವುದನ್ನು ತಪ್ಪಿಸಲು ಸರ್ಕಾರ 15 ದಿನಗಳ ಕಾಲ 3000 ಕ್ಯೂಸೆಕ್ ನೀರು ಹರಿಸಿತ್ತು.

ಇದೀಗ ಮತ್ತೆ ತಮಿಳುನಾಡಿಗೆ 2600 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ CWRC ಸೂಚನೆ ನೀಡಿದೆ. CWRC ಸಭೆಯಲ್ಲಿ ರಾಜ್ಯದಿಂದ ಎಸಿಎಸ್ ರಾಕೇಶ್ ಸಿಂಗ್ ಭಾಗಿ ಆಗಿದ್ದರು.

ಅ.31 ರವರೆಗೆ ತಮಿಳುನಾಡಿಗೆ ಪ್ರತಿದಿನ 3000 ಕ್ಯೂಸೆಕ್ ನೀರು ಬಿಡುವಂತೆ CWMA ಸೂಚನೆ ನೀಡಿದ್ದು, CWRA ಈ ಆದೇಶವನ್ನು ಎತ್ತಿಹಿಡಿದಿತ್ತು. ಇದೀಗ ಮತ್ತೆ ಮುಂದಿನ 15 ದಿನ ತಮಿಳುನಾಡಿಗೆ ಮತ್ತೆ 2600 ಕ್ಯೂಸೆಕ್ ನೀರು ಹರಿಸುವಂತೆ CWRC ಕರ್ನಾಟಕಕ್ಕೆ ಸೂಚನೆ ನೀಡಿದೆ.

You cannot copy content of this page

Exit mobile version