Friday, June 20, 2025

ಸತ್ಯ | ನ್ಯಾಯ |ಧರ್ಮ

ಯತ್ನಾಳ್ ಗೆ ಶಿಸ್ತು ಸಮಿತಿ ನೋಟಿಸ್: ವಿಜಯೇಂದ್ರ ವಿರುದ್ಧ ತಿರುಗಿ ಬಿದ್ರು ರೆಬಲ್ ನಾಯಕರು

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳಗೆ ಬಿಜೆಪಿ ಕೇಂದ್ರ ಶಿಸ್ತು ಸಮೀತಿಯಿಂದ ಶೋಕಾಸ್ ನೋಟಿಸ್ ಹೊರಡಿಸುತ್ತಿದ್ದಂತೆ, ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ಒಬ್ಬೊಬ್ಬರೇ ಈಗ ಬಿಜೆಪಿ ಹೈಕಮಾಂಡ್ ವಿರುದ್ದ ತಿರುಗಿ ಬಿದ್ದಿದ್ದಾರೆ. ಈ ವಿಚಾರವಾಗಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ತಿರುಗಿ ಬಿದ್ದ ರಮೇಶ್ ಜಾರಕಿಹೊಳಿ, ಯತ್ನಾಳಗೆ ಶೋಕಾಸ್‌ ನೋಟಿಸ್‌ ಇಂದು ಬಂದಿದ್ದಲ್ಲ, ಎರಡು ದಿನಗಳ ಹಿಂದೆಯೇ ಬಂದಿದೆ, ಮಾಧ್ಯಮಗಳಲ್ಲಿ ಇಂದು ಪ್ರಚಾರ ಆಗಿದೆ. ವಿಜಯೇಂದ್ರಗೆ ರಾಜ್ಯಾದ್ಯಕ್ಷ ಸ್ಥಾನ ನಿಭಾಯಿಸಲು ಆಗುವುದಿಲ್ಲ, ತಕ್ಷಣವೇ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಶಾಸಕ ರಮೇಶ್ ಜಾರಕಿಹೊಳಿ ಒತ್ತಾಯಿಸಿದ್ದಾರೆ.

ಬಿ.ಎಸ್. ಯಡಿಯೂರಪ್ಪ ಹುಟ್ಟು ಹೋರಾಟಗಾರ, ಆದರೆ ವಿಜಯೇಂದ್ರ ಬಿಎಸ್‌ವೈ ಅವರ ಕಾಲಿನ ಧೂಳಿವೂ ಸಮನಲ್ಲ. ಜೀನ್ಸ್ ಪ್ಯಾಂಟ್- ಟೀಶರ್ಟ್ ಹಾಕಿ ಅಡ್ಡಾಡುವ ವಯಸ್ಸು ಅವರದ್ದು. ಇನ್ನೂ ನಾಲ್ಕು ವರ್ಷಗಳ ಬಳಿಕ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಹುದ್ದೆ ನೀಡಬೇಕಿತ್ತು. ನಾವು ಯತ್ನಾಳ ಬೆನ್ನಿಗೆ ನಿಲ್ತಿವಿ. ಕೇಂದ್ರ ನಾಯಕರ ಮನವೊಲಿಸುತ್ತೇವೆ ಎಂದು ರಮೇಶ್ ಜಾರಕಿಹೊಳಿ ಹೇಳಿದರು.

ನನ್ನ ಬೆನ್ನಿಗೆ ನಿಲ್ಲುವಂತೆ ವಿಜಯೇಂದ್ರ ಹಿಂದುಳಿದ ನಾಯಕರಿಗೆ ಬೆದರಿಸುತ್ತಿದ್ದಾರೆ. ವಿಜಯೇಂದ್ರ ಜೊತೆಯಲ್ಲಿರುವ ಬಹುತೇಕರು ಹಿಂದುಳಿದ ಸಮುದಾಯದವರು. ಲಿಂಗಾಯತ, ಒಕ್ಕಲಿಗರು ಯಾರೂ ಇಲ್ಲ. ಪಾಪ ರೇಣುಕಾಚಾರ್ಯ ರಾಜಕೀಯ ಅಸ್ತಿತ್ವಕ್ಕಾಗಿ ಅವರ ಜೊತೆಗಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗಬೇಕು ಎಂದು ನಾನು ಬಹಿರಂಗವಾಗಿ ಹೇಳಲ್ಲ. ಇನ್ ಡೋರ್ ಸಭೆ ಮಾಡಿ ಕೇಳಲಿ ನಾನು ಹೇಳ್ತಿನಿ ಎಂದ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಇನ್ನು ಯತ್ನಾಳ್ ಬಣದಲ್ಲಿ ಗುರುತಿಸಿಕೊಂಡಿರುವ ಮತ್ತೋರ್ವ ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ, ಯತ್ನಾಳ್ ನೋಟಿಸ್ ಗೆ ಉತ್ತರ ನೀಡುತ್ತಾರೆ. ಉಚ್ಚಾಟನೆ ಮಾಡುತ್ತಾರಾ, ಉನ್ನತ ಸ್ಥಾನ ಕೊಡ್ತಾರಾ ಕಾದು ನೋಡಿ.. ಎಂದಿದ್ದಾರೆ.

ಯಾವ ಕಾರಣಕ್ಕೆ ನೋಟಿಸ್ ಕೊಟ್ಟಿದ್ದಾರೆ ಗೊತ್ತಿಲ್ಲ.  ನೋಟಿಸ್ ಗೆ ಯತ್ನಾಳ್ ಉತ್ತರ ಕೊಡುತ್ತಾರೆ. ವಕ್ಫ್ ವಿಚಾರವಾಗಿ ನೋಟಿಸ್ ಕೊಟ್ಟಿಲ್ಲ ವೈಯಕ್ತಿಕವಾಗಿ ನೋಟಿಸ್ ನೀಡಿದ್ದಾರೆ.  ವಕ್ಫ್ ವಿರುದ್ದದ ಹೋರಾಟಕ್ಕೂ ಈ ನೋಟಿಸ್  ಗೂ ಸಂಬಂಧವಿಲ್ಲ. ವಿಜಯೇಂದ್ರ ಎಷ್ಟು ಬಾರಿ ದೆಹಲಿಗೆ  ಹೋಗಿದ್ದಾರೆ.  ವಿಜಯೇಂದ್ರ ಅವರೇ ನೋಟಿಸ್ ಕೊಡಿಸಿದ್ದಾರೆ ಅನ್ನೋಕೆ ಆಗಲ್ಲ ಎಂದರು.

ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣ ಸತತವಾಗಿ ನಡೆಯುತ್ತಿದೆ. ಸಂಪೂರ್ಣ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಿಲ್ಲ  ಹಗುರವಾಗಿ ಚುನಾವಣೆ  ತೆಗೆದುಕೊಂಡವು ಅನ್ನೋದು ಅಕ್ಷಮ್ಯ ಅಪರಾಧ. ನಮ್ಮ ಅಮಾಯಕ ಕಾರ್ಯಕರ್ತರನ್ನ ವಜಾ ಮಾಡಲಾಗಿದೆ. ಹೀಗೆ ಮಾಡಿದರೆ ಪಕ್ಷಸಂಘಟನೆ ಹೇಗೆ ಸಾಧ್ಯ? ಎಂದು ಕುಮಾರ ಬಂಗಾರಪ್ಪ ಪ್ರಶ್ನಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page