Home ಬೆಂಗಳೂರು ಕಾಂಗ್ರೆಸ್‌ ದೂರು: ಜೆಪಿ ನಡ್ಡಾಗೆ ಸಮನ್ಸ್

ಕಾಂಗ್ರೆಸ್‌ ದೂರು: ಜೆಪಿ ನಡ್ಡಾಗೆ ಸಮನ್ಸ್

0
ಒಂದು ವಾರದೊಳಗೆ ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರಾಗುವಂತೆ ಅಮಿತ್ ಮಾಳವೀಯ ಮತ್ತು ವಿಜಯೇಂದ್ರಗೆ ನೋಟಿಸ್

ಬೆಂಗಳೂರು: ಮುಸ್ಲಿಂ ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಸಾಧಿಸಲು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಪಕ್ಷ ಸಂಕಷ್ಟಕ್ಕೆ ಸಿಲುಕಿದೆ.

ಈಗಾಗಲೇ ಚುನಾವಣಾ ಆಯೋಗ ಮಧ್ಯಪ್ರವೇಶಿಸಿ ಆ ಪೋಸ್ಟುಗಳನ್ನು ತೆಗೆದು ಹಾಕುವಂತೆ ‘ಎಕ್ಸ್’ಗೆ ಆದೇಶಿದೆ. ಇತ್ತೀಚೆಗಷ್ಟೇ ಬೆಂಗಳೂರು ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಒಂದು ವಾರದೊಳಗೆ ತಮ್ಮ ಮುಂದೆ ಹಾಜರಾಗುವಂತೆ ಸೂಚಿಸಿದ್ದಾರೆ.

ಅವರ ಜೊತೆಗೆ ಬಿಜೆಪಿ ಐಟಿ ಸೆಲ್ ಅಧ್ಯಕ್ಷ ಅಮಿತ್ ಮಾಳವೀಯ ಮತ್ತು ಪಕ್ಷದ ಕರ್ನಾಟಕ ಅಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧಿಕೃತ ಕರ್ನಾಟಕ ಬಿಜೆಪಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ ವೀಡಿಯೊ ಕುರಿತು ನೀಡಿದ ದೂರಿನ ಆಧಾರದ ಮೇಲೆ ಭಾನುವಾರ ಪ್ರಕರಣ ದಾಖಲಿಸಲಾಗಿದೆ.

ಈ ವಿಡಿಯೋದಲ್ಲಿ ಕಾಂಗ್ರೆಸ್ ಮುಸ್ಲಿಂ ಮೀಸಲಾತಿ ಪರವಾಗಿದೆ ಎನ್ನಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಂದನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಪೋಸ್ಟನ್ನು ಅಳಿಸಿ ತಮ್ಮ ಆಕ್ಷೇಪಣೆಗಳನ್ನು ವ್ಯಕ್ತಪಡಿಸುವಂತೆ ಆರೋಪಿಗಳಿಗೆ ಸೂಚಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

You cannot copy content of this page

Exit mobile version