ಬೆಂಗಳೂರು : ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ನಟ ಪುನೀತ್ ರಾಜ್ಕುಮಾರ್ ಅವರಿಗೆ ʼಕರ್ನಾಟಕ ರತ್ನʼ ಪ್ರಶಸ್ತಿ ನೀಡಲು ತೀರ್ಮಾನಿಸಿದ್ದು, ನವೆಂಬರ್ 1 ರಂದು ವಿಧಾನಸೌಧ ಆವರಣದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ ಎಂದು ಸಿಎಂ ಬೊಮ್ಮಾಯಿಯವರು ಹೇಳಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ರಾಜ್ ಕುಟುಂಬದವರ ಜೊತೆ ಮಾತನಾಡಿದ್ದು, ಕನ್ನಡಿಗರ ಮನೆಮಗನಾಗಿರುವ, ಎಲ್ಲರ ಮನಸಲ್ಲಿ ಚಿರಸ್ಥಾನ ಹೊಂದಿರುವ, ಯುವಜನರಿಗೆ ಪ್ರೇರಣೆಯಾಗಿರುವ ನಟ ಪುನೀತ್ ರಾಜ್ಕುಮಾರ್ ಪ್ರೀತಿಯ ಅಪ್ಪು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಮಾಧ್ಯಮದವರ ಮುಂದೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವೆಂಬರ್ 1ರಂದು ಸಂಜೆ 4 ಗಂಟೆಗೆ ವಿಧಾನಸೌಧ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ನವೆಂಬರ್ 1ರಿಂದ ಮುಂದಿನ ಹತ್ತು ದಿನಗಳಲ್ಲಿ ಅಪ್ಪು ಅವರ ಕಾರ್ಯಕ್ರಮ ಮೂರು ಭಾಗಗಳಲ್ಲಿ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ನೋಡಿ :🔸 Don’t miss this 🔸
♦ ಕನ್ನಡಿಗರ ಹೆಮ್ಮೆ, ಅಕಾಲಿಕವಾಗಿ ನಮ್ಮನ್ನು ಅಗಲಿದ ಅಪರೂಪದ ನಟ ಶಂಕರ್ ನಾಗ್ ಅವರ ಅಪರೂಪದ ಸಂದರ್ಶನ ಇಲ್ಲಿದೆ.
ನೋಡಿ ಹಾಗೆಯೇ ಶೇರ್ ಮಾಡಿ