Friday, June 20, 2025

ಸತ್ಯ | ನ್ಯಾಯ |ಧರ್ಮ

ಶಿರಹಟ್ಟಿ | ಹಾಲಶ್ರೀ ಸ್ವಾಮಿಯ ವಿರುದ್ಧ ಇನ್ನೊಂದು ವಂಚನೆ ಕೇಸು

ಶಿರಹಟ್ಟಿ: ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣದಲ್ಲಿ ಬಂಧಿರಾಗಿರುವ ಹಾಲಶ್ರೀ ಸ್ವಾಮಿಯ ವಿರುದ್ಧ ಇನ್ನೊಂದು ವಂಚನೆ ಪ್ರಕರಣ ದಾಖಲಾಗಿದ್ದು, ತನಗೆ ಒಂದು ಕೋಟಿ ರೂ ಮೋಸವಾಗಿದೆ ಎಂದು ದೂರುದಾರ ತಿಳಿಸಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ರಣತೂರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿದ್ದ ಸಂಜಯ್‌ ಚವಡಾಳ ಎನ್ನುವ ವ್ಯಕ್ತಿಯು ಹಾಲಶ್ರೀ ವಿರುದ್ಧ ವಂಚನೆ ಆರೋಪ ಮಾಡಿ, ಸೆಪ್ಟೆಂಬರ್ 19ರಂದು ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುನ್ನ ಶಿರಹಟ್ಟಿ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯೆಂದು ಬಿಂಬಿಸಿಕೊಂಡಿದ್ದ ಸಂಜಯ್ ಚವಡಾಳ ಬಿಜೆಪಿ ಟಿಕೆಟ್‌ ಪಡೆಯುವ ಸಲುವಾಗಿ ಹಾಲಶ್ರೀಗೆ ಲಂಚವಾಗಿ ನೀಡಿರುವುದಾಗಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈಗಾಗಲೇ ಪೊಲೀಸ್‌ ವಶದಲ್ಲಿರುವ ಹಾಲಶ್ರೀಯನ್ನು ನ್ಯಾಯಾಲಯ ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲಿ ಸಿಸಿಬಿ ಪೊಲೀಸರ ವಶಕ್ಕೆ ಹತ್ತು ದಿನಗಳ ಮಟ್ಟಿಗೆ ನೀಡಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page