Saturday, June 21, 2025

ಸತ್ಯ | ನ್ಯಾಯ |ಧರ್ಮ

ಬೆಂಗಳೂರು ವಿರೋಧ ಪಕ್ಷಗಳ ಸಭೆ: ಇಂದು ಸೀಟು ಹಂಚಿಕೆ ಮತ್ತು ಪ್ರಣಾಳಿಕೆ ಕುರಿತು ಚರ್ಚೆ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಒಗ್ಗಟ್ಟಿನ ಹೋರಾಟದ ಕಾರ್ಯತಂತ್ರವನ್ನು ಅಂತಿಮಗೊಳಿಸಲು 26 ವಿರೋಧ ಪಕ್ಷಗಳ ಸಭೆ ಸೋಮವಾರ ಪ್ರಾರಂಭವಾಯಿತು. ‘ಒಗ್ಗಟ್ಟಿನಲ್ಲಿ ಬಲವಿದೆ’ ಎಂಬ ಘೋಷಣೆಯೊಂದಿಗೆ ಪ್ರಾರಂಭವಾದ ಎರಡು ದಿನಗಳ ಸಭೆಯಲ್ಲಿ ಸೀಟು ಹಂಚಿಕೆ ಮತ್ತು ಹೆಚ್ಚಿನ ಸ್ಥಾನಗಳಲ್ಲಿ ಕೂಟದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು, ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು ನಿಗದಿಪಡಿಸುವುದು ಮತ್ತು ಜಂಟಿ ಆಂದೋಲನವನ್ನು ಯೋಜಿಸುವ ಬಗ್ಗೆಯೂ ಚರ್ಚಿಸಲಾಗುವುದು.

ಬೆಂಗಳೂರಿನ ಬೀದಿಗಳು ಪ್ರತಿಪಕ್ಷಗಳ ಒಗ್ಗಟ್ಟಿನ ಘೋಷಣೆಯೊಂದಿಗೆ ದೊಡ್ಡ ಜಾಹೀರಾತು ಫಲಕಗಳು ಮತ್ತು ಪೋಸ್ಟರುಗಳಿಂದ ಇಕ್ಕಿರಿದಿವೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್,  ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸಭೆಯಲ್ಲಿ ಭಾಗವಹಿಸಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್,  ಆರ್‌ಎಲ್‌ಡಿಯ ಜಯಂತ್ ಚೌಧರಿ ಕೂಡ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ವಿರೋಧ ಪಕ್ಷದ ನಾಯಕರು ಸಭೆಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಬಗ್ಗೆ ಚರ್ಚಿಸಲಿದ್ದಾರೆ ಮತ್ತು ಜಂಟಿ ಆಂದೋಲನವನ್ನು ಘೋಷಿಸಲಿದ್ದಾರೆ. ಲೋಕಸಭಾ ಚುನಾವಣೆಗೆ ಜಂಟಿ ಪ್ರಣಾಳಿಕೆ ಬಿಡುಗಡೆ ಮತ್ತು ಹೆಚ್ಚಿನ ಸ್ಥಾನಗಳಲ್ಲಿ ಸಮ್ಮತ ವಿರೋಧ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆಯೂ ಅವರು ಚರ್ಚಿಸಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page