Wednesday, August 20, 2025

ಸತ್ಯ | ನ್ಯಾಯ |ಧರ್ಮ

ಹೊಸ ಮಸೂದೆ ವಿರುದ್ಧ ಹೆಚ್ಚಿದ ಆಕ್ರೋಶ; ಮಸೂದೆ ಪ್ರತಿಗಳನ್ನು ಅಮಿತ್ ಷಾ ಕಡೆ ಹರಿದು ಎಸೆದ ಪ್ರತಿಪಕ್ಷ ನಾಯಕರು

ಲೋಕಸಭೆಯಲ್ಲಿ ಗೃಹ ಸಚಿವ ಅಮಿತ್ ಷಾ ಮಂಡಿಸಿದ ಹೊಸ ನಿಬಂಧನೆ ಇಂದು ಲೋಕಸಭೆಯಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದೆ. ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದರೆ ಮತ್ತು 30 ದಿನಗಳಿಗಿಂತ ಹೆಚ್ಚು ಜೈಲು ಶಿಕ್ಷೆ ಅನುಭವಿಸಿದ್ದರೆ ಅವರನ್ನು ಪದಚ್ಯುತಗೊಳಿಸುವ ನಿಬಂಧನೆ ವಿರುದ್ಧ ಪ್ರತಿಪಕ್ಷಗಳು ದೊಡ್ಡ ಮಟ್ಟಕ್ಕೆ ಪ್ರತಿಭಟನೆ ನಡೆಸಿದ್ದಾರೆ.

ಈ ಬಗೆಗಿನ ಚರ್ಚೆಯ ಸಮಯದಲ್ಲಿ ಜೋರಾಗಿ ಘೋಷಣೆಗಳನ್ನು ಕೂಗಿದ ಕೆಲವು ವಿರೋಧ ಪಕ್ಷದ ಸಂಸದರು ಮಂಡನೆಯಾದ ಮಸೂದೆಯ ಪ್ರತಿಗಳನ್ನು ಹರಿದು ಗೃಹ ಸಚಿವ ಅಮಿತ್ ಶಾ ಅವರ ಕಡೆಗೆ ಎಸೆದರು. ಕೆಲವು ವಿರೋಧ ಪಕ್ಷದ ಸದಸ್ಯರ ಅಶಿಸ್ತಿನ ವರ್ತನೆಯಿಂದಾಗಿ ಲೋಕಸಭೆ ಕಲಾಪವನ್ನು ಸಂಜೆ 5 ಗಂಟೆಗೆ ಮುಂದೂಡಲಾಯಿತು.

ಪ್ರಧಾನಿ, ಸಿಎಂಗಳ ವಿರುದ್ಧದ ಆರೋಪಗಳಿಗೆ ವಜಾ ನಿಯಮ ಅನ್ವಯವಾಗುವುದಿಲ್ಲ. ಈಗಿನ ಕಾನೂನಿನಲ್ಲಿ ಪಿಎಂ, ಕೇಂದ್ರ ಸಚಿವರ ವಜಾಕ್ಕೆ ಅವಕಾಶವಿಲ್ಲ. ಹೊಸ ಮಸೂದೆಯಿಂದ ಪಿಎಂ, ಸಿಎಂ, ಸಚಿವರ ವಜಾಕ್ಕೆ ಅವಕಾಶವಿರಲಿದೆ. ಅವರು 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಗೆ ಒಳಗಾದರೆ ಹುದ್ದೆಯಿಂದ ವಜಾಗೊಳಿಸಲಾಗುವುದು. ಯಾವುದೇ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರೆ ಪ್ರಧಾನಮಂತ್ರಿಗಳು, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ರಾಜ್ಯಗಳ ಸಚಿವರನ್ನು ವಶಕ್ಕೆ ಪಡೆದರೆ ಅಥವಾ ಬಂಧನಕ್ಕೆ ಒಳಗಾದರೆ ಅವರನ್ನು 30 ದಿನದೊಳಗೆ ಹುದ್ದೆಯಿಂದ ವಜಾಗೊಳಿಸಲು ಅವಕಾಶವಿದೆ. ಅಥವಾ ಅವರು 30 ದಿನದೊಳಗೆ ರಾಜೀನಾಮೆ ನೀಡುವುದು ಕಡ್ಡಾಯವಾಗಲಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page