Home ದೆಹಲಿ ಇದು ಅಮೃತ ಕಾಲವಲ್ಲ.. ವಿಷ ಯುಗ!: ನೀಟ್ ಪೇಪರ್ ಸೋರಿಕೆ ಕುರಿತು ಕೇಂದ್ರದ ವಿರುದ್ಧ ಪ್ರತಿಪಕ್ಷಗಳ...

ಇದು ಅಮೃತ ಕಾಲವಲ್ಲ.. ವಿಷ ಯುಗ!: ನೀಟ್ ಪೇಪರ್ ಸೋರಿಕೆ ಕುರಿತು ಕೇಂದ್ರದ ವಿರುದ್ಧ ಪ್ರತಿಪಕ್ಷಗಳ ಆಕ್ರೋಶ

0
ಭಾರತ್‌ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ

ದೆಹಲಿ: ನೀಟ್-ಯುಜಿ ಪರೀಕ್ಷೆಯ ಅಕ್ರಮ ಮತ್ತು ಪೇಪರ್ ಸೋರಿಕೆ ಪ್ರಕರಣದ ವಿರುದ್ಧ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಮುಗಿಬಿದ್ದಿವೆ. ಈ ಹಗರಣವು ದೇಶದ ಯುವಜನತೆಯ ವಿರುದ್ಧ ನಡೆದ ಅಪರಾಧ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ ಅವರು ಪದೇ ಪದೇ ಹೇಳುವ ‘ಅಮೃತ ಕಾಲ’ವು ಈಗ ದೇಶಕ್ಕೆ ‘ವಿಷ ಯುಗ’ವಾಗಿ ಮಾರ್ಪಟ್ಟಿದೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಪರೀಕ್ಷಾ ಪ್ರಕ್ರಿಯೆಯ ಪ್ರತಿಯೊಂದು ಹಂತದಲ್ಲೂ ವಂಚನೆ ಎದ್ದು ಕಾಣುತ್ತಿದೆ ಎಂದು ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಕಿಡಿಕಾರಿದ್ದಾರೆ.

ಈ ಅನ್ಯಾಯದ ವಿರುದ್ಧ ವಿದ್ಯಾರ್ಥಿಗಳು ದೊಡ್ಡ ಮಟ್ಟದಲ್ಲಿ ಚಳವಳಿ ನಡೆಸಬೇಕು ಎಂದು ಆಮ್ ಆದ್ಮಿ ಪಕ್ಷದ (AAP) ಸಂಚಾಲಕ ಅರವಿಂದ್ ಕೇಜ್ರಿವಾಲ್ ಕರೆ ನೀಡಿದ್ದಾರೆ. ಇತ್ತ ಆರ್‍ಜೆಡಿ (RJD) ಪಕ್ಷವು ಈ ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕೆಂದು ಆಗ್ರಹಿಸಿದೆ. ಸರಣಿ ಪೇಪರ್ ಸೋರಿಕೆಗಳಿಂದಾಗಿ ಪರೀಕ್ಷಾ ವ್ಯವಸ್ಥೆಯ ಮೇಲೆ ಸಾರ್ವಜನಿಕರಿಗಿದ್ದ ವಿಶ್ವಾಸಾರ್ಹತೆ ಕುಸಿಯುತ್ತಿದೆ ಎಂದು ಸಿಪಿಐ(ಎಂ) ಆತಂಕ ವ್ಯಕ್ತಪಡಿಸಿದೆ.

You cannot copy content of this page

Exit mobile version