Home ಬ್ರೇಕಿಂಗ್ ಸುದ್ದಿ ಆಯುಧ ಪೂಜೆಯಲ್ಲಿ ರಾಸಾಯನಿಕ ಪದಾರ್ಥ ಬಳಸದಂತೆ ಆದೇಶ ; ವಿವಾದಕ್ಕೆ ಸಿಎಂ ಸ್ಪಷ್ಟನೆ

ಆಯುಧ ಪೂಜೆಯಲ್ಲಿ ರಾಸಾಯನಿಕ ಪದಾರ್ಥ ಬಳಸದಂತೆ ಆದೇಶ ; ವಿವಾದಕ್ಕೆ ಸಿಎಂ ಸ್ಪಷ್ಟನೆ

0

ದಸರಾ ವಿಶೇಷ ಪೂಜೆಯ ಹಿನ್ನೆಲೆಯಲ್ಲಿ ವಿಧಾನ ಸೌಧದಲ್ಲಿ ಆಯೋಜಿಸಿರುವ ಆಯುಧ ಪೂಜೆಯಲ್ಲಿ ಯಾವುದೇ ರಾಸಾಯನಿಕ ಪದಾರ್ಥಗಳನ್ನು ಬಳಸಬಾರದು ಎಂದು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಇದರ ಬಗ್ಗೆ ಕೆಲ ಮಾಧ್ಯಮಗಳ ಮೂಲಕ ಅಪಪ್ರಚಾರಕ್ಕೆ ಇಳಿದ ಪ್ರತಿಪಕ್ಷಗಳಿಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ

ಅದರಂತೆ ಪೂಜಾ ವಿಧಾನಗಳಲ್ಲಿ ಬಳಸುವ ಅರಿಶಿನ, ಕುಂಕುಮ, ರಂಗೋಲಿಯಲ್ಲಿ ರಾಸಾಯನಿಕ ಪದಾರ್ಥಗಳನ್ನು ಬಳಸದಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಇದರ ಜೊತೆಗೆ ವಿಧಾನಸೌಧದಲ್ಲ ದೀಪ ಹಚ್ಚಿ, ವಿದ್ಯುತ್ ದೀಪವನ್ನೂ ಆನ್ ಮಾಡಿ ಹೋಗುವಂತಿಲ್ಲ. ವಿಧಾನಸೌಧ, ವಿಕಾಸಸೌಧ ಬಹುಮಹಡಿ ಕಟ್ಟಡಗಳಿಗೆ ಈ ನಿಯಮ ಜಾರಿಯಾಗಿದೆ.

ಆದರೆ ಅರಿಶಿನ ಮತ್ತು ಕುಂಕುಮ ಹಚ್ಚಬಾರದು ಎಂಬ ಅಂಶವನ್ನು ಇಟ್ಟುಕೊಂಡು ಈಗ ಪ್ರತಿಪಕ್ಷಗಳ ಕಡೆಯಿಂದ ವಿವಾದಕ್ಕೆ ಕಾರಣವಾಗಿದೆ. ಕೆಲವು ಮಾಧ್ಯಮಗಳ ಮೂಲಕ ಬಿಜೆಪಿ ನಾಯಕರು ಸರ್ಕಾರದ ಮೇಲೆ ಮುಗಿ ಬಿದ್ದಿದ್ದು, ಈ ಸಂಬಂಧ ಸ್ವತಃ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಈ ಆದೇಶದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ
ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುವುದರಿಂದ ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವು ಪಾಲಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ‌.

ಜೊತೆಗೆ ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಜನತೆಯಲ್ಲಿ ಮನವಿ ಮಾಡುತ್ತೇನೆ ಎಂದು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

You cannot copy content of this page

Exit mobile version