Saturday, October 26, 2024

ಸತ್ಯ | ನ್ಯಾಯ |ಧರ್ಮ

ಅದಿರು ನಾಪತ್ತೆ ಪ್ರಕರಣ : ಶಾಸಕ ಸತೀಶ್ ಸೈಲ್ ಗೆ 7 ವರ್ಷ ಶಿಕ್ಷೆ ಪ್ರಕಟ ; ಶಾಸಕ ಸ್ಥಾನದಿಂದ ಅನರ್ಹ

ಅದಿರು ನಾಪತ್ತೆ ಪ್ರಕರಣ ಸಂಬಂಧ ಆರು ಪ್ರಕರಣಗಳಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಗೆ ಜನಪ್ರತಿನಿಧಿಗಳ ನ್ಯಾಯಾಲಯ ಏಳು ವರ್ಷ  ಜೈಲು ಶಿಕ್ಷ ವಿಧಿಸಿ ತೀರ್ಪು ನೀಡಿದೆ. ಎಲ್ಲಾ ಆರು ಪ್ರಕರಣಗಳ ಒಟ್ಟಾರೆ ಪರಿಗಣಿಸಿ ಈ ಶಿಕ್ಷೆ ಪ್ರಕಟವಾಗಿದೆ.

ಈ ಹಿಂದೆ ನ್ಯಾಯಾಲಯ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿತ್ತು. ಈಗ ಎಲ್ಲಾ ಪ್ರಕರಣಗಳನ್ನು ಪರಿಗಣಿಸಿ ಏಳು ವರ್ಷ ಶಿಕ್ಷೆ ಪ್ರಕಟಿಸಿದೆ.

ಶಿಕ್ಷೆ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಶಾಸಕ ಸೈಲ್ ಮನವಿ ಮಾಡಿದ್ದರು. ಆದರೆ ಇದೀಗ 7 ವರ್ಷ ಜೈಲು ಆಗಿರುವುದರಿಂದ ಶಾಸಕ ಸ್ಥಾನವೂ ಅನರ್ಹ ಆಗಲಿದೆ.

ವಂಚನೆ ಪ್ರಕರಣದಲ್ಲಿ 7 ವರ್ಷ ಸಜೆ, ಒಳಸಂಚು ಆರೋಪ ಪ್ರಕರಣದಲ್ಲಿ 5 ವರ್ಷ ಹಾಗೂ ಅದಿರು ಕಳ್ಳತನ ಪ್ರಕರಣದಲ್ಲಿ 3 ವರ್ಷ ಸಜೆ ವಿಧಿಸಿ ಕೋರ್ಟ್​ ಆದೇಶಿಸಿದೆ. ಜೊತೆಗೆ, ಒಟ್ಟು 9 ಕೋಟಿ 60 ಲಕ್ಷ ರೂ. ದಂಡ ವಿಧಿಸಲಾಗಿದೆ.

ಮುಟ್ಟುಗೋಲು ಹಾಕಿದ್ದ 11,312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದು ಶಿಕ್ಷೆ ಪ್ರಮಾಣವನ್ನು ಕಾಯ್ದಿರಿಸಿತ್ತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page