Wednesday, January 28, 2026

ಸತ್ಯ | ನ್ಯಾಯ |ಧರ್ಮ

ಎಸ್ಸಿ ಎಸ್ಟಿ ಮೀಸಲಾತಿ ವಿಚಾರ; ಆಗಸ್ಟ್ 21 ಭಾರತ್ ಬಂದ್ ಗೆ ಕರೆ ನೀಡಿದ ಸಂಘಟನೆಗಳು

ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪನ್ನು ವಿರೋಧಿಸಿ ಮೀಸಲಾತಿ ಬಚಾವೋ ಸಂಘರ್ಷ ಸಮಿತಿ ದೇಶಾದ್ಯಂತ ಭಾರತ್ ಬಂದ್ ಗೆ ಕರೆ ನೀಡಿದೆ. ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಪ್ರಶ್ನಿಸುವುದು ಮತ್ತು ಅದನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸುವುದು ಈ ಭಾರತ್ ಬಂದ್ ನ ಮುಖ್ಯ ಉದ್ದೇಶವಾಗಿದೆ.

ಈ ಬಂದ್ ಗೆ ವಿವಿಧ ಸಾಮಾಜಿಕ ಮತ್ತು ರಾಜಕೀಯ ಸಂಘಟನೆಗಳ ಬೆಂಬಲ ಸಿಗುವ ನಿರೀಕ್ಷೆಯಿದೆ. ನ್ಯಾಯಾಲಯದ ಅನ್ಯಾಯದ ತೀರ್ಪನ್ನು ಎತ್ತಿ ತೋರಿಸುವುದು ಪ್ರತಿಭಟನೆಯ ಉದ್ದೇಶವಾಗಿದೆ.

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಬಂದ್ ಸಂಬಂದಿತ ಪೋಸ್ಟ್ ಮತ್ತು ಟ್ವಿಟ್ ಗಳು ನಡೆದಿದ್ದು, ‘#21_August_Bharat_Bandh’ ಹ್ಯಾಶ್ ಟ್ಯಾಗ್ ಪ್ರಸ್ತುತ ಟ್ರೆಂಡಿಂಗ್ ನಲ್ಲಿದೆ. ಈ ಹ್ಯಾಶ್ ಟ್ಯಾಗ್ ನೊಂದಿಗೆ ಎಕ್ಸ್ ನಲ್ಲಿ 15.4 ಸಾವಿರ ಪೋಸ್ಟ್ ಗಳನ್ನು ಪೋಸ್ಟ್ ಮಾಡಲಾಗಿದೆ.

ಎಸ್ಸಿ ಮತ್ತು ಎಸ್ಟಿ ಗುಂಪುಗಳಲ್ಲಿ ಉಪ-ವರ್ಗಗಳನ್ನು ರಚಿಸಲು ಅವರು ರಾಜ್ಯಗಳಿಗೆ ಅವಕಾಶ ನೀಡಿದರು, “ನಿಜವಾಗಿಯೂ ಅಗತ್ಯವಿರುವವರಿಗೆ ಮೀಸಲಾತಿಯಲ್ಲಿ ಆದ್ಯತೆ ಸಿಗಬೇಕು” ಎಂದು ಹೇಳಿದರು. ಈ ನಿರ್ಧಾರವು ವ್ಯಾಪಕ ಚರ್ಚೆಗೆ ಕಾರಣವಾಗಿದೆ ಮತ್ತು ಭಾರತ್ ಬಂದ್ ಕರೆ ನೀಡಿದೆ ಎಂದು ವರದಿಯಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page