Tuesday, January 27, 2026

ಸತ್ಯ | ನ್ಯಾಯ |ಧರ್ಮ

ಉತ್ತರ ಪ್ರದೇಶ ಮತ್ತು ಬಿಹಾರ: ಭಾರಿ ಮಳೆಗೆ 40ಕ್ಕೂ ಹೆಚ್ಚು ಜನರ ಸಾವು

ಲಕ್ನೋ: ಉತ್ತರ ಪ್ರದೇಶದಲ್ಲಿ ಗುರುವಾರ ಗುಡುಗು ಸಹಿತ ಭಾರಿ ಮಳೆಯಾಗಿದೆ. ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಕನಿಷ್ಠ 22 ಜನರು ಸಾವಿಗೀಡಾಗಿದ್ದಾರೆ.

ಈ ಮಳೆಯಿಂದ 15 ಮನೆಗಳು ನಾಶವಾಗಿವೆ. ರಾಜ್ಯ ಸರ್ಕಾರ ಹೊರಡಿಸಿದ ಹೇಳಿಕೆಯಲ್ಲಿ 45 ಪ್ರಾಣಿಗಳು ಸಾವನ್ನಪ್ಪಿವೆ ಎಂದು ತಿಳಿಸಿದೆ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಈ ನಡುವೆ, ಶುಕ್ರವಾರವೂ ಉತ್ತರ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪ್ರಾದೇಶಿಕ ಹವಾಮಾನ ಇಲಾಖೆಯು ರಾಜ್ಯಕ್ಕೆ ಆರೆಂಜ್‌ ಅಲರ್ಟ್‌ ನೀಡಿದೆ ನೀಡಿದೆ. ಲಕ್ನೋ, ವಾರಣಾಸಿ, ಅಯೋಧ್ಯೆ, ಚಂದೌಲಿ, ಬಾರಾಬಂಕಿ, ಶ್ರಾವಸ್ತಿ, ಬಲರಾಂಪುರ, ಮಹಾರಾಜ್ಗಂಜ್, ಸಿದ್ಧಾರ್ಥ ನಗರ, ಕುಶಿನಗರ, ಗೊಂಡಾ, ಬಸ್ತಿ, ಗೋರಖ್ಪುರ, ಡಿಯೋರಿಯಾ, ಉನ್ನಾವೊ, ಪ್ರತಾಪ್ಗಢ, ಅಮೇಥಿ, ಸುಲ್ತಾನ್ಪುರ, ಜೌನ್ಪುರ್, ಅಂಬೇಡ್ಕರ್ ನಗರ, ಸಂಬೀರ್ ನಗರ, ಸುಲ್ತಾನಪುರ, ಎಸ್.ಜಾಜಿಪುರ ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ಮುನ್ಸೂಚನೆ ನೀಡಿದೆ.

ಬಿಹಾರದಲ್ಲಿ ಗುಡುಗು ಮತ್ತು ಸಿಡಿಲಿಗೆ 21 ಜನರು ಸಾವನ್ನಪ್ಪಿದ್ದಾರೆ. ಈ ಮಳೆಯಿಂದಾಗಿ ಮನೆಗಳು ಕುಸಿದಿವೆ. ದನಗಳು ಸತ್ತವು. ಅಪಾರ ಬೆಳೆ ಹಾನಿ ಸಂಭವಿಸಿದೆ. ಘಟನೆಯಲ್ಲಿ ಮೃತಪಟ್ಟವರಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page