Home ದೇಶ ಪ್ರತಿಪಕ್ಷಗಳ ಧರಣಿ: ಲೋಕಸಭೆ ನಾಳೆಗೆ ಮುಂದೂಡಿಕೆ

ಪ್ರತಿಪಕ್ಷಗಳ ಧರಣಿ: ಲೋಕಸಭೆ ನಾಳೆಗೆ ಮುಂದೂಡಿಕೆ

0

ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರು ತುರ್ತುಪರಿಸ್ಥಿತಿಯನ್ನು ಅವಧಿಯ ಉಲ್ಲೇಖಿಸಿದ್ದು ವಿವಾದಕ್ಕೀಡಾಗಿದೆ. ದೇಶದಲ್ಲಿ ತುರ್ತು ಪರಿಸ್ಥಿತಿ ಕರಾಳ ದಿನವಾಗಿದೆ ಎಂದು ಸ್ಪೀಕರ್ ಹೇಳಿದರು. ಇದು ಸದನದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿತು.

ಸ್ಪೀಕರ್‌ ಹೇಳಿಕೆಗೆ ವಿರೋಧ ಪಕ್ಷದ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಧರಣಿ ಆರಂಭಿಸಿದರು. ಸ್ಪೀಕರ್ ವಿರುದ್ಧ ಘೋಷಣೆ ಕೂಗಿದರು. ಈ ಗೊಂದಲದಿಂದ ಸ್ಪೀಕರ್ ಸಭೆಯನ್ನು ನಾಳೆಗೆ ಮುಂದೂಡುವುದಾಗಿ ಘೋಷಿಸಿದರು. ಇದಕ್ಕೂ ಮುನ್ನ, ಎರಡನೇ ಬಾರಿಗೆ ಲೋಕಸಭೆಯ ಸ್ಪೀಕರ್ ಆಗಿ ಆಯ್ಕೆಯಾದ ಓಂ ಬಿರ್ಲಾ ಅವರನ್ನು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅಭಿನಂದಿಸಿದರು.

ಈ ಬಾರಿ ಸದನದಲ್ಲಿ ಪ್ರತಿಪಕ್ಷಗಳ ಸಂಖ್ಯೆ ಹೆಚ್ಚಿದೆ ಎಂದ ಅವರು, ಸದನದಲ್ಲಿ ಧ್ವನಿ ಎತ್ತಲು ಸಭಾಧ್ಯಕ್ಷರು ಸಹಕರಿಸಬೇಕು. ಸದನದಲ್ಲಿ ಪ್ರತಿಪಕ್ಷಗಳ ಧ್ವನಿ ಹತ್ತಿಕ್ಕಿದರೆ ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದರು. ಜನರ ಧ್ವನಿಯನ್ನು ಪರಿಣಾಮಕಾರಿಯಾಗಿ ಆಲಿಸುವುದು ಮುಖ್ಯ. ಅದಕ್ಕಾಗಿಯೇ ಸದನದಲ್ಲಿ ಮಾತನಾಡಲು ವಿರೋಧ ಪಕ್ಷಗಳಿಗೆ ಸಮಯಾವಕಾಶ ನೀಡುವಂತೆ ರಾಹುಲ್ ಗಾಂಧಿ ಸ್ಪೀಕರ್ ಅವರನ್ನು ಕೋರಿದರು.

You cannot copy content of this page

Exit mobile version