ಚೆನ್ನೈ: ತಮಿಳುನಾಡಿನ ರಾಣಿಪೇಟೆ ಜಿಲ್ಲೆಯಲ್ಲಿ ಪ್ಯಾಸೆಂಜರ್ ರೈಲು ಹಳಿ ತಪ್ಪಿದೆ. ಚಿತ್ತೇರಿ ರೈಲು ನಿಲ್ದಾಣದ ಬಳಿ ಅರಕ್ಕೋಣಂ – ಕಟ್ಪಾಡಿ ಮೆಮು ಪ್ಯಾಸೆಂಜರ್ ಹಳಿ ತಪ್ಪಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಚಿತ್ತೇರಿ ರೈಲು ನಿಲ್ದಾಣದಿಂದ ಹೊರಟ ಸ್ವಲ್ಪ ಸಮಯದ ನಂತರ ರೈಲು ಹಳಿ ತಪ್ಪಿದೆ. ತಕ್ಷಣ ಜಾಗೃತರಾದ ಲೋಕೋ ಪೈಲಟ್ ರೈಲನ್ನು ನಿಲ್ಲಿಸಿದರು.
ರೈಲು ಹಳಿ ತಪ್ಪಿದ ನಂತರ ಪ್ರಯಾಣಿಕರು ಭಯಭೀತರಾಗಿದ್ದರು. ಕೆಲವು ಪ್ರಯಾಣಿಕರು ರೈಲಿನಿಂದ ಜಿಗಿದು ಓಡಿಹೋದರು. ಅರಕ್ಕೋಣಂ – ಕಟ್ಪಾಡಿ ಪ್ಯಾಸೆಂಜರ್ ರೈಲು ಹಳಿ ತಪ್ಪಿದ ಪರಿಣಾಮ ಹಲವಾರು ರೈಲುಗಳ ಸಂಚಾರಕ್ಕೆ ತೀವ್ರ ಅಡ್ಡಿಯಾಯಿತು. ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.