Home ಮೀಡಿಯಾ ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶ

ಸರ್ಕಾರದ ಸಾಧನಾ ಸಮಾವೇಶ ಪ್ರಶ್ನಿಸಿ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶ

0

ಕಳೆದ ವಿಧಾನ ಸಭಾ ಚುನಾವಣಾ ಪ್ರಣಾಳಿಕೆಯಲ್ಲಿ  ಕರಾಳ ಕೃಷಿ ಕಾಯ್ದೆಗಳ ರದ್ದತಿ, ಬಲವಂತದ ಭೂ ಸ್ವಾಧೀನಕ್ಕೆ ತಡೆ, ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರಿಗೆ ರಕ್ಷಣೆ ,ಸಂವಿಧಾನ ಹಕ್ಕುಗಳ ಖಾತರಿ ,ಕೋಮುವಾದಿ ಕೃತ್ಯಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ, ರೈತರಿಗೆ ಬೆಂಬಲ ಬೆಲೆ ರಕ್ಷಣೆ ಮುಂತಾದ ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ಎರಡು ವರ್ಷಗಳಾದರೂ ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನೇ ಮುಂದುವರೆಸುತ್ತಿರುವ ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರಶ್ನಿಸಿ, ಮೇ 20,2025 ರಂದು ಸಂಯುಕ್ತ ಹೋರಾಟ ಕರ್ನಾಟಕವು  ಬೆಂಗಳೂರಿನ ಗಾಂಧಿ ಭವನದಲ್ಲಿ ಜನ ಚಳವಳಿಗಳ ಜನಾಗ್ರಹ ಸಮಾವೇಶ ಹಮ್ಮಿಕೊಂಡಿದೆ.

ಅಷ್ಟೇ ಅಲ್ಲದೆ ಸರ್ಕಾರದ ವಿದ್ಯುತ್ ಖಾಸಗೀಕರಣ ಸೇರಿದಂತೆ ಮೋದಿ ಸರ್ಕಾರದ ಜನ ವಿರೋಧಿ ಕಾರ್ಪೊರೇಟ್ ಪರವಾದ ಎಲ್ಲಾ ಕ್ರಮಗಳನ್ನು ವೇಗವಾಗಿ ಜಾರಿಗೊಳಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಸಾಧನಾ ಸಮಾವೇಶವನ್ನು ಈ ಸಂದರ್ಭದಲ್ಲಿ ಪ್ರಶ್ನಿಸಿ ಖಂಡನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ತಿಳಿಸಿದೆ.

ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ರೈತ, ಕಾರ್ಮಿಕ, ದಲಿತ, ಮಹಿಳಾ, ವಿದ್ಯಾರ್ಥಿ ಯುವಜನ ಸಂಘಟನೆಗಳ ಪ್ರಮುಖ ಇನ್ನೂರೈವತ್ತು ಕಾರ್ಯಕರ್ತರು ಭಾಗವಹಿಸುತ್ತಿದ್ದು ಹಿಂದಿನ ಬಿಜೆಪಿ ಸರ್ಕಾರದ ಕ್ರಮಗಳನ್ನೇ ಮುಂದುವರೆಸುತ್ತಿರುವ ಔಚಿತ್ಯವನ್ನು ಪ್ರಶ್ನಿಸಿ ,ಜನಾಗ್ರಹ ನಿರ್ಣಯಗಳನ್ನು ಈಡೇರಿಸುವಂತೆ ಆಗ್ರಹಿಸಲಾಗುತ್ತಿದೆ.

ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅನುಸರಿಸುತ್ತಿದ್ದ ನೀತಿಗಳನ್ನೇ ಈ ಸರ್ಕಾರ ಕೂಡ ಮುಂದುವರೆಸುತ್ತಿದೆ. ಕಾರ್ಮಿಕರ ದುಡಿಮೆ ಅವಧಿಯನ್ನು 8 ಗಂಟೆಯಿಂದ 12 ಗಂಟೆಗೆ ಹಿಂದಿನ ಸರ್ಕಾರ ಏರಿಕೆ ಮಾಡಿತ್ತು. ಈ ಸರ್ಕಾರ ಈ ಕಾರ್ಮಿಕ ವಿರೋಧಿ ಕ್ರಮವನ್ನು ರದ್ದುಪಡಿಸುವ ಬದಲು ಏರಿಕೆಯನ್ನು ನೊಟೀಪಿಕೇಷನ್ ಮಾಡಿದೆ. ನೂರಾರು ವರ್ಷಗಳಿಂದ ಉಳುಮೆ ಮಾಡಿಕೊಂಡು ಬರುತ್ತಿರುವ ಲಕ್ಷಾಂತರ ಬಡ ದಲಿತ ಹಿಂದುಳಿದ ವರ್ಗಗಳ ಬಗರ್ ಹುಕಂ ಹಾಗೂ ಅರಣ್ಯ ಸಾಗುವಳಿ ರೈತರ ಭೂಮಿ ಹಕ್ಕು ಕೋರಿರುವ ಅರ್ಜಿಗಳನ್ನು ಸಕ್ರಮಾತಿ ಸಮಿತಿ ಮುಂದೆ ತರದೇ ತಹಶಿಲ್ದಾರ್ ಹಾಗೂ ಜಿಲ್ಲಾಧಿಕಾರಿ ಗಳ ಹಂತಗಳಲ್ಲೇ ಕಾನೂನುಬಾಹಿರವಾಗಿ ವಜಾಗೊಳಿಸಿ ರಾಜ್ಯದ ಎಲ್ಲ ಕಡೆ ನಿರ್ದಯವಾಗಿ ಪೊಲೀಸ್ ಹಾಗೂ ಅರಣ್ಯ ಇಲಾಖೆ ಮೂಲಕ ದೌರ್ಜನ್ಯ ಬಳಸಿ ಒಕ್ಕಲೆಬ್ಬಿಸಲಾಗುತ್ತಿದೆ. ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ವನ್ನು ಮನಸೋ ಇಚ್ಚೆ ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಫಲವತ್ತಾದ ಕೃಷಿ ಭೂಮಿ ಯನ್ನು ಉಳಿಸಿಕೊಳ್ಳದೇ ಆಹಾರ ಭದ್ರತೆಗೆ ಗಂಭೀರ ಆಪಾಯ ತಂದೊಡ್ಡಿದೆ. ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಅನಿರ್ದಿಷ್ಟವಾಗಿ ಬಲವಂತದ ಹಾಗೂ ಅನ್ಯಾಯದ ಭೂ ಸ್ವಾಧೀನ ವಿರೋಧಿಸಿ ಹೋರಾಡುತ್ತಿರುವ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ರೈತರಿಗೆ ಅಂತಿಮ ಅಧಿಸೂಚನೆ ಹೊರಡಿಸಿ ದೌರ್ಜನ್ಯದ ಮೂಲಕ ಭೂಮಿ ಕಿತ್ತುಕೊಳ್ಳುತ್ತಿದೆ ಈ ಎಲ್ಲಾ ವಿವರಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುತ್ತದೆ ಎಂದು ಸಂಯುಕ್ತ ಹೋರಾಟ ಕರ್ನಾಟಕ ತಿಳಿಸಿದೆ.

ಮೇಲಿಂದ ಮೇಲೆ ಬಂಡವಾಳ ಹೂಡಿಕೆ ಸಮಾವೇಶಗಳನ್ನು ಏರ್ಪಡಿಸುತ್ತಿರುವುದು ಕೇವಲ ಕೃಷಿ ಭೂಮಿ ಕಬಳಿಕೆಯ ದುರುದ್ದೇಶಕ್ಕಾಗಿ ಮಾತ್ರ. ಈಗಾಗಲೇ ಕೆಐಎಡಿಬಿ ವಶದಲ್ಲಿರುವ ಲಕ್ಷಾಂತರ ಎಕರೆ ಭೂಮಿಯನ್ನು ಸಮರ್ಥವಾಗಿ ಬಳಸದೇ ಮತ್ತೇ ಮತ್ತೇ ಹೊಸ ಹೊಸ ಭೂ ಸ್ವಾಧೀನವನ್ನು  ರಿಯಲ್ ಎಸ್ಟೇಟ್  ಹಿತಾಸಕ್ತಿ ರಕ್ಷಣೆಗಾಗಿ ಮಾಡಲಾಗುತ್ತಿದೆ. ಕೃಷಿ ಮಾರುಕಟ್ಟೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಪರವಾಗಿ ದುರ್ಬಲ ಗೊಳಿಸಿ ಖಾಸಗಿ ಮಾರುಕಟ್ಟೆ ಗಳನ್ನು ಪ್ರೊತ್ಸಾಯಿಸಲಾಗುತ್ತಿದೆ. ಸ್ಮಾರ್ಟ್ ಮೀಟರ್ ಅಳವಡಿಕೆ ಮೂಲಕ ವಿದ್ಯುತ್ ಖಾಸಗೀಕರಣ ಕ್ಕೆ ಬೆಂಬಲ ನೀಡಲಾಗುತ್ತಿದ್ದು ಕೃಷಿ ಪಂಪಸೆಟ್ ಗಳಿಗೂ ಪ್ರೀ ಪೇಯ್ಡ್ ಮೀಟರ್ ಅಳವಡಿಕೆ ಯನ್ನು ಒತ್ತಾಯಿಸಲಾಗುತ್ತಿದೆ. ಕಾರ್ಮಿಕ ವಿರೋಧಿ ಲೇಬರ್ ಕೋಡ್ ಗಳ ಜಾರಿಗೆ ಕ್ರಮ ವಹಿಸುತ್ತಿದ್ದು,ಯಾವುದೇ ಓಟಿ ಸೌಲಭ್ಯ ಇಲ್ಲದೇ ದಿನಕ್ಕೆ 12 ಗಂಟೆ ದುಡಿಸಿಕೊಳ್ಳಲು ಕಾರ್ಖಾನೆಗಳಿಗೆ ಅನುಮತಿ ನೀಡುತ್ತಿದೆ. ಶಿಕ್ಷಣ, ಆರೋಗ್ಯ ಸೇರಿದಂತೆ ಪ್ರತಿಯೊಂದು ನಾಗರಿಕ ಸೌಲಭ್ಯಗಳನ್ನು ಖಾಸಗೀಕರಿಸಲಾಗುತ್ತಿದ್ದು,ಹತ್ತು ತಿಂಗಳ  ಆತಿಥಿ ಶಿಕ್ಷಕರ ನೇಮಕಾತಿಗೂ ಸಾಮಾನ್ಯ ಪ್ರವೇಶ ಪರೀಕ್ಷೆ ಬರೆಯುವಂತೆ ಆದೇಶ ಹೊರಡಿಸಿದೆ. ದಲಿತರು, ಮಹಿಳೆಯರು,ಮಕ್ಕಳು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ವಿಫಲರಾಗಿರುವುದು ಮಾತ್ರವಲ್ಲ ಕೋಮುವಾದಿ ಹಾಗೂ ಮೂಲಭೂತ ವಾದಿ ಶಕ್ತಿಗಳ ಉಪಟಳಗಳನ್ನು ಹಿಮ್ಮೆಟ್ಟಿಸಲು ವಿಫಲವಾಗಿದೆ .ಅದೇ ಸಂದರ್ಭದಲ್ಲಿ ಪ್ರಜಾಸತ್ತಾತ್ಮಕ ಚಟುವಟಿಕೆಗಳ ಮೇಲೆ ಹೆಚ್ಚು ಹೆಚ್ಚು ನಿರ್ಬಂಧ ಏರಿಕೆ ಮಾಡಿ ಶಾಂತಿಯುತ ಪ್ರತಿಭಟನೆ ಗಳ ಮೇಲೂ ಕೂಡ ಕಠಿಣ ಕಾನೂನು ಗಳನ್ನು ಅನ್ವಯಿಸಿ ಮೊಕದ್ದಮೆ ದಾಖಲಿಸಲಾಗುತ್ತಿದೆ. ಹೀಗೆ ಪ್ರತಿಯೊಂದು ವಲಯದಲ್ಲೂ ರಾಜ್ಯ ಸರ್ಕಾರದ ಜನ ವಿರೋಧಿ ಕ್ರಮಗಳನ್ನು ಜನಾಗ್ರಹ ಸಮಾವೇಶದಲ್ಲಿ ಚರ್ಚಿಸಲಾಗುವುದು ಎಂದು ಸಂಯುಕ್ತ ಹೋರಾಟ ಕರ್ನಾಟಕ ತಿಳಿಸುತ್ತದೆ ಎಂದು ಹೋರಾಟ ಸಮಿತಿ ರಾಜ್ಯ ಸರ್ಕಾರದ ಕ್ರಮಗಳನ್ನು ಖಂಡಿಸಿ, ಜನ ಚಳವಳಿಗಳ ಜನಾಗ್ರಹ ಸಮಾವೇಶ ಸರ್ಕಾರವನ್ನು ಪ್ರಶ್ನಿಸಲಿದೆ.

ಈ ಸಮಾವೇಶ ಮೇ 20 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದೆ ಎಂದು ಸಮಿತಿ ತಿಳಿಸಿದೆ.

You cannot copy content of this page

Exit mobile version