Wednesday, June 25, 2025

ಸತ್ಯ | ನ್ಯಾಯ |ಧರ್ಮ

ಇಂದು ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ; ಮೋದಿ ಹಾಜರು, ಮುಂದುವರೆದ ಶಿಂಧೆ ಗೊಂದಲ

ಮಹಾಯುತಿ ಮೈತ್ರಿಕೂಟ ಅಧಿಕಾರಕ್ಕೆ ಬಂದು 11 ದಿನಗಳ ನಂತರ, ಬುಧವಾರ ನಡೆದ ಪ್ರಮುಖ ಸಭೆಯಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಆಯ್ಕೆಯನ್ನು ಬಿಜೆಪಿ ನಾಯಕತ್ವವು ಅಂತಿಮಗೊಳಿಸಿದೆ.

ಇಂದು ಸಂಜೆ ಮುಂಬೈನ ಆಜಾದ್ ಮೈದಾನದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮಹಾರಾಷ್ಟ್ರದ 21ನೇ ಮುಖ್ಯಮಂತ್ರಿಯಾಗಿ ಬಿಜೆಪಿಯ ಹಿರಿಯ ನಾಯಕ ದೇವೇಂದ್ರ ಫಡ್ನವೀಸ್ ಅವರು ಇಂದು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರೊಂದಿಗೆ ಉಪ ಮುಖ್ಯಮಂತ್ರಿ ಹಾಗೂ ಕೆಲವು ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರೊಂದಿಗೆ ಆಜಾದ್ ಮೈದಾನ ತಲುಪಲಿದ್ದಾರೆ.

ಮಹಾಯುತಿ ಮುಖ್ಯಮಂತ್ರಿಯಾಗಿ ನಾಮನಿರ್ದೇಶನಗೊಂಡ ನಂತರ, ದೇವೇಂದ್ರ ಫಡ್ನವಿಸ್ ಅವರು ಇಂದು (ಡಿಸೆಂಬರ್ 5) ಸಂಜೆ 5.30 ಕ್ಕೆ ಮುಂಬೈನ ಆಜಾದ್ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬುಧವಾರ ಹೇಳಿದ್ದಾರೆ.

ದೇವೇಂದ್ರ ಫಡ್ನವೀಸ್ ಸರ್ಕಾರಕ್ಕೆ ಬೆಂಬಲ ಪತ್ರ ನೀಡಿದ್ದರೂ, ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಾರೋ ಇಲ್ಲವೋ ಎಂಬ ಗೊಂದಲದಲ್ಲಿ ಏಕನಾಥ್ ಶಿಂಧೆ ಸಂಜೆವರೆಗೂ ಇದ್ದರು. ಆದರೆ ಬಿಜೆಪಿಯ ಹಲವು ಮೂಲಗಳು ಫಡ್ನವೀಸ್ ಅವರೊಂದಿಗೆ ಸಂಜೆ ನಡೆಸಿದ ಮಾತುಕತೆ ಸಕಾರಾತ್ಮಕವಾಗಿತ್ತು ಎಂದು ಹೇಳುತ್ತವೆ.

ಫಡ್ನವೀಸ್ ಜೊತೆಗೆ ಅವರು ಮತ್ತು ಅಜಿತ್ ಪವಾರ್ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಗೃಹ ಸಚಿವಾಲಯದ ಜತೆಗೆ ಉಪಮುಖ್ಯಮಂತ್ರಿ ಹುದ್ದೆಯನ್ನು ಒಪ್ಪಿಕೊಳ್ಳಲು ಶಿಂಧೆ ಹಠ ಹಿಡಿದಿದ್ದಾರೆ ಎಂಬ ವಿಶ್ವಾಸಾರ್ಹ ಮಾಹಿತಿ ಇದೆ. ಇದಕ್ಕೆ ಪ್ರತಿಕ್ರಿಯಿಸಿದ ದೇವೇಂದ್ರ ಫಡ್ನವೀಸ್ ಶಿಂಧೆ ಅವರೊಂದಿಗೆ ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು. ರಾಜಭವನಕ್ಕೆ ತೆರಳುವ ಮುನ್ನ ಶಿಂಧೆ ಅವರ ಅಧಿಕೃತ ನಿವಾಸ ‘ವರ್ಷಾ’ಕ್ಕೆ ಭೇಟಿ ನೀಡಿ ಸರ್ಕಾರಕ್ಕೆ ಸೇರ್ಪಡೆಗೊಳ್ಳುವಂತೆ ಫಡ್ನವೀಸ್ ಅವರು ಶಿಂಧೆ ಅವರ ಬೇಡಿಕೆಗಳನ್ನು ಪರಿಹರಿಸಲು ಬಿಜೆಪಿ ಹೈಕಮಾಂಡ್‌ಗೆ ತಿಳಿಸುವುದಾಗಿ ಭರವಸೆ ನೀಡಿದರು.

ನಂತರ ರಾಜಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ನಾಳೆ ಸಂಜೆ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತೀರಾ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡುವುದಾಗಿ ಶಿಂಧೆ ಹೇಳಿದರು 2022 ರಲ್ಲಿ ಅವರು ಇಲ್ಲಿ ಮುಖ್ಯಮಂತ್ರಿಯಾಗಿದ್ದರು ಮತ್ತು ಈಗ ನಾವು ಅವರನ್ನು ಬೆಂಬಲಿಸುತ್ತಿದ್ದೇವೆ. ಒಗ್ಗಟ್ಟಿನಿಂದ ಒಳ್ಳೆಯ ಸರ್ಕಾರ ನಡೆಸೋಣ. ಸಂಜೆ, ದೇವೇಂದ್ರ ಫಡ್ನವೀಸ್ ಮತ್ತೊಮ್ಮೆ ಶಿಂಧೆ ಅವರನ್ನು ಅವರ ನಿವಾಸಕ್ಕೆ ಭೇಟಿಯಾಗಲು ಹೋದರು. ಉಭಯ ನಾಯಕರ ನಡುವೆ ಸುಮಾರು 45 ನಿಮಿಷಗಳ ಕಾಲ ಮಾತುಕತೆ ನಡೆಯಿತು. ಆದರೆ ಆಗಲೂ ಶಿಂಧೆ ಅವರಿಂದ ಯಾವುದೇ ಖಚಿತ ಭರವಸೆ ಸಿಕ್ಕಿರಲಿಲ್ಲ. ಎನ್‌ಸಿಪಿ ಅಭ್ಯರ್ಥಿ ಅಜಿತ್ ಪವಾರ್ ಅವರು ಫಡ್ನವಿಸ್ ಅವರೊಂದಿಗೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page