Home ಬ್ರೇಕಿಂಗ್ ಸುದ್ದಿ ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳನ್ನು ಬಂಧಿಸಿದ ಪೊಲೀಸರು

0

ಮಂಗಳೂರಿನ ಕುಡುಪುವಿನಲ್ಲಿ ಭೀಕರವಾಗಿ ಹತ್ಯೆಯಾದ ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಲಾಗಿದ್ದು, ಪೊಲೀಸರು ಬಂಧಿತರ ವಿವರ ನೀಡಿದ್ದಾರೆ. ಕೊಲೆಯ ಬಳಿಕ ಆರೋಪಿಗಳು ಸ್ವಿಫ್ಟ್ ಕಾರಿನಲ್ಲಿ ಎಸ್ಕೇಪ್ ಆಗಿದ್ದರು. ಈ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಕೊಲೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು ಎಂಟು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರದಲ್ಲಿ ಪ್ರಮುಖ ಆರೋಪಿಗಳು ಮುಸ್ಲಿಂ ಧರ್ಮೀಯರೆನ್ನಲಾಗಿದ್ದು ಇವರಿಗೆ ಬಜರಂಗ ದಳದ ಮಾಜಿ ಸದಸ್ಯನೊಬ್ಬನೂ ಸಹಾಯ ಮಾಡಿದ್ದ ಎನ್ನಲಾಗಿದ್ದು ಆತನನ್ನೂ ಬಂಧಿಸಲಾಗಿದೆ.

ಬಂಧಿತ 8 ಆರೋಪಿಗಳ ಪೈಕಿ ಇಬ್ಬರು ಹಿಂದೂಗಳಿದ್ದಾರೆ. ಅವರ ವಿವರನ್ನು ನೀಡಿದ್ದಾರೆ. ಅಬ್ದುಲ್ ಸಫ್ವಾನ್ (29), ನಿಯಾಜ್ (28), ಕಲಂದರ್ ಶಾಫಿ (31), ಮೊಹಮ್ಮದ್ ಮುಝಮ್ಮಿಲ್ (32), ರಂಜಿತ್ (19), ನಾಗರಾಜ್ (20), ಮೊಹಮ್ಮದ್ ರಿಜ್ವಾನ್ ​(28) ಮತ್ತು ಆದಿಲ್ ಮೆಹರೂಫ್ ಬಂಧಿತರು.

ಇತ್ತ ಬಂಧಿತರಲ್ಲಿ ಒಬ್ಬನಾದ ಆದಿಲ್ ಮೆಹರೂಫ್ ಈ ಹಿಂದೆ 2022 ರಲ್ಲಿ ಕೊಲೆಯಾದ ಫಾಸಿಲ್ ನ ಸಹೋದರ ಎನ್ನಲಾಗಿದೆ. ಹಾಗೆಯೇ ಕೊಲೆಗಾರ ತಂಡಕ್ಕೆ 5 ಲಕ್ಷ ಸುಪಾರಿ ನೀಡಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

ಮತ್ತೊಬ್ಬ ಆರೋಪಿ ನಿಯಾಝ್ ಸ್ನೇಹಿತರಾದ ನಾಗರಾಜ್ ಮತ್ತು ರಂಜಿತ್ ಸಂಪರ್ಕ ಮಾಡುತ್ತಾರೆ. ಈ ಇಬ್ಬರು ಸಫ್ವಾನ್ ಮನೆಯಲ್ಲಿ ಎರಡು ದಿನಗಳ ಕಾಲ ವಾಸವಿದ್ದರು. ಮೇ 1ರಂದು ಸುಹಾಸ್ ಚಲನವಲನ ಗಮನಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದರು.

ನಿನ್ನೆ ಸಂಜೆ ಸುಹಾಸ್ ಶೆಟ್ಟಿ ಅಂತಿಮ ಕ್ರಿಯೆಗಳು ನೆರವೇರಿದೆ. ಈ ವೇಳೆ ಸಾಕಷ್ಟು ಜನ ಸೇರಿದ್ದರು. ನಿನ್ನೆ ದಕ್ಷಿಣ ಕನ್ನಡ ಬಂದ್ ಘೋಷಿಸಲಾಗಿತ್ತು. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಮೇ 5 ರವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.

You cannot copy content of this page

Exit mobile version