Home ರಾಜಕೀಯ ರಾಜ್ಯ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ: ಬಿಜೆಪಿ ನಾಯಕರ ವಶಕ್ಕೆ ಪಡೆದ ಪೊಲೀಸರು

ರಾಜ್ಯ ಸರ್ಕಾರದ ಮೇಲೆ ಭ್ರಷ್ಟಾಚಾರ ಆರೋಪ: ಬಿಜೆಪಿ ನಾಯಕರ ವಶಕ್ಕೆ ಪಡೆದ ಪೊಲೀಸರು

0

ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಇಂದು ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ್ದಾರೆ.

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನಿಸಿದ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಆರ್.‌ ಅಶೋಕ್‌, ಸುರೇಶ ಕುಮಾರ್‌, ಅರಗಜ್ಞಾನೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಭ್ರಷ್ಟಾಚಾರ ಆರೋಪ ಹೊರಿಸಿರುವ ಬಿಜೆಪಿ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ, ಮೈಸೂರು ಮುಡಾ ಹಗರಣ, ವಸತಿ ಇಲಾಖೆಯ ಭ್ರಷ್ಟಾಚಾರ, ಟ್ರ್ಯಾಕ್ಟರ್ ಹಂಚಿಕೆಯಲ್ಲಿ ಹಗರಣ, ಕಿಯೋನಿಕ್ಸ್ ಹಗರಣ ಸೇರಿದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟ ಆಡಳಿತವನ್ನು ವಿರೋಧಿಸಿ ಇಂದು ಸಿದ್ದರಾಮಯ್ಯ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಮೂಲಕ ಬಿಜೆಪಿ ಪ್ರತಿಭಟನೆಗೆ ಮುಂದಾಗಿದೆ.

You cannot copy content of this page

Exit mobile version