ಮಹಾರಾಷ್ಟ್ರ: ಗಡ್ಚಿರೋಲಿಯಲ್ಲಿ ಎನ್‌ಕೌಂಟರ್, ನಾಲ್ವರು ಮಾವೋವಾದಿಗಳ ಹತ್ಯೆ

ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲೀಯರು ಹತರಾಗಿದ್ದಾರೆ. ಮಾವೋವಾದಿಗಳ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ.

ಗಾಯಗೊಂಡ ಯೋಧನನ್ನು ಚಿಕಿತ್ಸೆಗಾಗಿ ನಾಗ್ಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯ ಕೊಪ್ರಿ ಅರಣ್ಯ ಪ್ರದೇಶದಲ್ಲಿ ಸಿಆರ್‌ಪಿಎಫ್ ಕಮಾಂಡೋ ತಂಡವು ಕೂಂಬಿಂಗ್ ನಡೆಸುತ್ತಿದ್ದಾಗ ಮಾವೋವಾದಿಗಳನ್ನು ಎನ್‌ಕೌಂಟರ್ ಮಾಡಿದ್ದಾರೆ. ಗಡ್ಚಿರೋಲಿಯಲ್ಲಿ ನಕ್ಸಲೀಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇತ್ತೀಚೆಗಷ್ಟೇ ನಕ್ಸಲೀಯ ದಂಪತಿ 8 ಲಕ್ಷ ರೂಪಾಯಿ ಬಹುಮಾನ ಪಡೆದು ಪೊಲೀಸರ ಮುಂದೆ ಶರಣಾಗಿದ್ದರು.

ಎರಡು ದಿನಗಳ ಹಿಂದೆ ಗಡ್ಚಿರೋಲಿ ಜಿಲ್ಲೆಯಲ್ಲಿ ನಕ್ಸಲೀಯ ದಂಪತಿ 8 ಲಕ್ಷ ರೂಪಾಯಿ ಬಹುಮಾನದೊಂದಿಗೆ ಪೊಲೀಸರ ಮುಂದೆ ಶರಣಾಗಿದ್ದರು. ದಂಪತಿಯನ್ನು ಅಸಿನ್ ರಾಜಾರಾಮ್ ಕುಮಾರ್ (37) ಅಲಿಯಾಸ್ ಅನಿಲ್ ಮತ್ತು ಅವರ ಪತ್ನಿ ಅಂಜು ಸುಳ್ಯ ಜಾಲೆ (28) ಅಲಿಯಾಸ್ ಸೋನಿಯಾ ಎಂದು ಗುರುತಿಸಲಾಗಿದೆ.

ರಾಜಾರಾಂ ಕುಮಾರ್ ಒಡಿಶಾದ ಮಾವೋವಾದಿ ಪತ್ರಿಕಾ ತಂಡದ ಪ್ರದೇಶ ಸಮಿತಿಯ ಸದಸ್ಯರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಹರಿಯಾಣದ ನರ್ವಾನಾ ಗ್ರಾಮದವರು.. ಅವರು ನಕಲಿ ಗುರುತಿನೊಂದಿಗೆ ಹಿಮಾಚಲದ ಶಿಮ್ಲಾ ಬಳಿಯ ಪ್ರದೇಶದಲ್ಲಿ ವಾಸಿಸುತ್ತಿದ್ದರು.

Related Articles

ಇತ್ತೀಚಿನ ಸುದ್ದಿಗಳು