Friday, June 20, 2025

ಸತ್ಯ | ನ್ಯಾಯ |ಧರ್ಮ

ರಾಹುಲ್ ಮತ್ತು ಪ್ರಿಯಾಂಕಾ ಅವರನ್ನು ತಡೆದ ಪೊಲೀಸರು

ಲಕ್ನೋ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಬುಧವಾರ ಬೆಳಗ್ಗೆ ಸಂಭಾಲ್ ಜಿಲ್ಲೆಗೆ ತೆರಳುತ್ತಿದ್ದಾಗ ಪೊಲೀಸರು ತಡೆದರು. ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಗಾಜಿಪುರ ಗಡಿಯ ಬಳಿ ಅವರನ್ನು ತಡೆಹಿಡಿಯಲಾಯಿತು.

ರಾಹುಲ್ ಮತ್ತು ಪ್ರಿಯಾಂಕಾ ಭೇಟಿ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗಾಜಿಯಾಬಾದ್ ತಲುಪಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು. ರಾಹುಲ್ ನೇತೃತ್ವದ ಕಾಂಗ್ರೆಸ್ ಪ್ರತಿನಿಧಿಗಳ ಗುಂಪು ಸಂಭಾಲ್ ಗೆ ಭೇಟಿ ನೀಡಲಿದೆ ಎಂದು ಗೊತ್ತಾಗಿದೆ.

ನವೆಂಬರ್ 24 ರಂದು ಸಂಭಾಲ್‌ನಲ್ಲಿನ ಮಸೀದಿಯೊಂದರ ನ್ಯಾಯಾಲಯದ ಆದೇಶದ ಸಮೀಕ್ಷೆಯು ಹಿಂಸಾಚಾರಕ್ಕೆ ತಿರುಗಿತು. ಸಮೀಕ್ಷೆಗೆ ಅಡ್ಡಿಪಡಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದರು. ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇದರಿಂದ ಸಂಭಾಲ್‌ಗೆ ಹೊರಗಿನವರ ಪ್ರವೇಶಕ್ಕೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಕಳೆದ ವಾರ ಸಮಾಜವಾದಿ ಪಕ್ಷದ ಹಲವು ಸಂಸದರನ್ನು ಜಿಲ್ಲೆಗೆ ಪ್ರವೇಶಿಸದಂತೆ ಪೊಲೀಸರು ತಡೆದಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page