Home ಕರ್ನಾಟಕ ಚುನಾವಣೆ - 2023 ಸ್ಲಂ ಜನರ ಸಮಸ್ಯೆಗಳಿಗೆ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಬೇಕು : ಎ.ನರಸಿಂಹಮೂರ್ತಿ 

ಸ್ಲಂ ಜನರ ಸಮಸ್ಯೆಗಳಿಗೆ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಬೇಕು : ಎ.ನರಸಿಂಹಮೂರ್ತಿ 

0

ಪ್ರೆಸ್ ಕ್ಲಬ್‌ನಲ್ಲಿ ಇಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯು ಪತ್ರಿಕಾಗೋಷ್ಠಿ ನಡೆಸಿ ರಾಜ್ಯದ ಸ್ಲಂ ನಿವಾಸಿಗಳ ನಿರೀಕ್ಷೆಗಳಿಗೆ ಸಂಬಂಧಿಸಿದಂತೆ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ “ಸ್ಲಂ ನಿವಾಸಿಗಳ ಪ್ರಣಾಳಿಕೆ” ಬಿಡುಗಡೆಯನ್ನು ಮಾಡಲಾಯಿತು.

ರಾಜ್ಯದ ಸ್ಲಂ‌ ನಿವಾಸಿಗಳ ನಿರೀಕ್ಷೆಗಳನ್ನು ರಾಜಕೀಯ ಪಕ್ಷಗಳು  ತಮ್ಮ ಪ್ರಣಾಳಿಕೆಯಲ್ಲಿ ಆದ್ಯತೆ ಮೇರೆಗೆ ಸೇರ್ಪಡೆ ಮಾಡಿಕೊಳ್ಳುವಂತೆ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿ ಮನವಿ‌ಮಾಡಿದರು.

ರಾಜ್ಯದ ಸ್ಲಂ‌ ನಿವಾಸಿಗಳ ನಿರೀಕ್ಷೆಗಳು : 

೧. ಕೊಳಗೇರಿ ಮತ್ತು ಸ್ಲಂ ನಿವಾಸಿಗಳ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯವನ್ನು ಘೋಷಿಸಬೇಕು.

೨. ಸ್ಲಂ ಜನರ ಅಭಿವೃದ್ಧಿ ನಿಗಮ ಸ್ಥಾಪನೆಯಾಗಬೇಕು.

೩. ಸ್ಲಂ ನಿವಾಸಿಗಳಿಗೆ ನಗರ ಉದ್ಯೋಗ ಖಾತ್ರಿ ಯೋಜನೆ ಜಾರಿ ಮಾಡಬೇಕು.

೪. ರಾಜ್ಯದಲ್ಲಿ ವಸತಿ ಹಕ್ಕು ಕಾಯಿದೆ ಜಾರಿಯಾಗಬೇಕು.

೫. ರಾಜ್ಯದ 3.36 ಲಕ್ಷ ಸ್ಲಂ ಕುಟುಂಬಗಳಿಗೆ ಹಕ್ಕುಪತ್ರವನ್ನು ಕ್ರಯ ಮಾಡುವ ಮೂಲಕ ಭೂ ಮಾಲೀಕತ್ವ ನೀಡಬೇಕು.

೬. ಸ್ಲಂ ಜನರಿಗೆ ಉಚಿತವಾಗಿ ಮನೆ ‌ನಿರ್ಮಾಣ, ಸಬ್ಸಿಡಿ ಹೆಚ್ಚಳ ಮತ್ತು ಜನರೇ ನಿರ್ಮಿಸಿಕೊಳ್ಳುವಂತಹ ಯೋಜನೆಗಳು ಜಾರಿಯಾಗಬೇಕು.

೭. ರಾಜ್ಯದಲ್ಲಿರುವ ಖಾಸಗಿ ಮಾಲೀಕತ್ವದ ಕೊಳಚೆ ಪ್ರದೇಶಗಳಿಗೆ ಹಕ್ಕುಪತ್ರ ನೀಡಬೇಕು.

೮. ನಗರ ಲ್ಯಾಂಡ್ ಬ್ಯಾಂಕ್ ನೀತಿ ಜಾರಿಯಾಗಬೇಕು ಮತ್ತು ನೆಲಬಾಡಿಗೆ ಸ್ಲಂಗಳಿಗೆ ನೀತಿ ರೂಪಿಸಬೇಕು.

೯. ರಾಜ್ಯದಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯನ್ನು ಬಲಗೊಳಿಸಬೇಕು.

೧೦. ಸರ್ಕಾರಿ ಶಾಲೆಗಳ ಸಬಲೀಕರಣವಾಗಬೇಕು ಮತ್ತು ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ ನಿಲ್ಲಬೇಕು.

೧೧. ಕರ್ನಾಟಕ ಸಮಗ್ರ ಸ್ಲಂ ಅಭಿವೃದ್ಧಿ ಕಾಯಿದೆ 2018ರ ಕರಡನ್ನು ಜಾರಿ‌ ಮಾಡಬೇಕು.

೧೨. ನಗರ ಬಡತನದ ಪ್ರಮಾಣವನ್ನು ಇಳಿಕೆ ಮಾಡಬೇಕು.

ಒಟ್ಟು 12 ಅಂಶಗಳನ್ನು ಆಯಾ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಆದ್ಯತೆ ನೀಡುವ ಮೂಲಕ ಸ್ಲಂ ಜನರ ಸಮಸ್ಯೆಗಳಿಗೆ ಪರಿಹಾರ ನೀಡಬೇಕೆಂದು ನರಸಿಂಹಮೂರ್ತಿ ಮನವಿ ಮಾಡಿದರು.

You cannot copy content of this page

Exit mobile version