ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಜೋರಾಗಿದೆ ಕಳೆದ ವಾರ ಸಂಪೂರ್ಣ ನಿಂತಿದ್ದ ಮಳೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಏಕಾಏಕಿ ಶುರುವಾಗಿದೆ. ಮುಂದಿನ ಮೂರು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಾರಿ ಮಳೆ ಮುನ್ಸೂಚನೆ ಎದುರಾಗಿದೆ. ಭಾಗಶಃ ಸುಮಾರು 8 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಸಾಧ್ಯತೆಗಳು ದಟ್ಟವಾಗಿವೆ.
ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವ ಪರಿಣಾಮ ಈಗ ಈ ಮಳೆ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಸುರಿಯುವ ಮುನ್ಸೂಚನೆ ಎದುರಾಗಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಅಂದರೆ ಶನಿವಾರದಿಂದ ಸೋಮವಾರದ ವರೆಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ಬಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮುಂದಿನ 2 ದಿನ ಭಾರಿ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಿದೆ. ಈ ವೇಳೆ 204 ಮಿಮೀವರೆಗೆ ಮಳೆಯಾಗುವ ಸಾಧ್ಯತೆ ಇದೆ. ಗಾಳಿ ಜೋರಾಗಿ ಬೀಸುವುದರಿಂದ ಸಮುದ್ರದಲ್ಲಿ ಮೀನುಗಾರಿಕೆ ನಡೆಸದಂತೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಹಾಸನ, ಮೈಸೂರಿನಲ್ಲಿ ಜೂ.14ರಿಂದ ಜೂ.15ರವರೆಗೆ ಬಿರುಸಾಗಿ ಮಳೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ 299 ಮಿ.ಮೀ ಬಾರಿ ಮಳೆಯಾಗಿದೆ. ನಂತರ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ 282 ಮಿ.ಮೀ ಮಳೆಯಾದ ಬಗ್ಗೆ ವರದಿಯಾಗಿದೆ.