Sunday, June 22, 2025

ಸತ್ಯ | ನ್ಯಾಯ |ಧರ್ಮ

ಟಾರ್ಗೆಟ್‌ ಪ್ರಕಾಶ್‌ ರಾಜ್: ನಟನ ಕಡೆ ಕೈ ಚಾಚಿದ ಇಡಿ

ಹೊಸದಿಲ್ಲಿ: ಚಿನ್ನಾಭರಣ ವ್ಯವಹಾರಕ್ಕೆ ಸಂಬಂಧಿಸಿದ 100 ಕೋಟಿ ರೂ. ಖೊಟ್ಟಿ ಯೋಜನೆಗೆ ಸಂಬಂಧಿಸಿದಂತೆ ನಟ ಪ್ರಕಾಶ್‌ರಾಜ್‌ಗೆ ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೆ ಸಮನ್ಸ್ ನೀಡಿದೆ.

ಪ್ರಕರಣದ ತನಿಖೆಯ ಭಾಗವಾಗಿ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಲಾಗಿದೆ. ಪ್ರಕಾಶ್‌ರಾಜ್ ತಮಿಳುನಾಡಿನ ತಿರುಚ್ಚಿಯ ಪ್ರಣವ್ ಜ್ಯುವೆಲರ್ಸ್‌ನ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಅವರು ಈ ಯೋಜನೆಯನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.


ಈ ಖೊಟ್ಟಿ ಯೋಜನೆಗೆ ಸಂಬಂಧಿಸಿದಂತೆ ಚೆನ್ನೈ ಸೇರಿದಂತೆ ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಲ್ಲಿ ಶಾಖೆಗಳನ್ನು ಹೊಂದಿರುವ ಆಭರಣ ಸರಣಿಯ ಮಾಲೀಕರ ಶಾಖೆಗಳು ಮತ್ತು ಮನೆಗಳ ಮೇಲೆ 100 ಕೋಟಿ ಭ್ರಷ್ಟಾಚಾರದ ಆರೋಪದ ಮೇಲೆ ಇಡಿ ದಾಳಿ ನಡೆಸಿದೆ. ಆಭರಣ ಉದ್ಯಮದ ಬ್ರಾಂಡ್ ಅಂಬಾಸಿಡರ್ ಆಗಿರುವ ನಟ ಪ್ರಕಾಶ್ರಾಜ್ ಈ ಬಗ್ಗೆ ಇನ್ನೂ ಹೇಳಿಕೆ ನೀಡಿಲ್ಲ.

ಪ್ರಣವ್ ಜ್ಯುವೆಲ್ಲರ್ಸ್ ನಡೆಸುತ್ತಿದ್ದ ಮಳಿಗೆಗಳನ್ನು ಅಕ್ಟೋಬರ್‌ನಲ್ಲಿ ಮುಚ್ಚಲಾಗಿತ್ತು. ದೂರುಗಳ ಆಧಾರದ ಮೇಲೆ ತಮಿಳುನಾಡಿನ ತಿರುಚ್ಚಿಯ ಜ್ಯುವೆಲ್ಲರ್ಸ್ ಮಾಲೀಕ ಮಧನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಮಾಲೀಕರು ಮತ್ತು ಅವರ ಪತ್ನಿ ವಿರುದ್ಧ ಲುಕ್‌ಔಟ್ ನೋಟಿಸ್ ಕೂಡ ಜಾರಿ ಮಾಡಲಾಗಿತ್ತು.

ಎರಡು ದಿನಗಳ ಹಿಂದೆ, ಹೆಚ್ಚಿನ ಆದಾಯವನ್ನು ಮರಳಿ ನೀಡುವ ಚಿನ್ನದ ಹೂಡಿಕೆ ಯೋಜನೆಯ ಹೆಸರಿನಲ್ಲಿ ಪ್ರಣವ್ ಜ್ಯುವೆಲ್ಲರ್ಸ್ 100 ಕೋಟಿ ರೂ.ಗಳನ್ನು ಸಂಗ್ರಹಿಸಿದೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಹೂಡಿಕೆ ಮಾಡಿದ ಮೊತ್ತವನ್ನು ಹೂಡಿಕೆದಾರರಿಗೆ ಹಿಂತಿರುಗಿಸಲಾಗಿಲ್ಲ ಎಂದು ತನಿಖೆ ಆರೋಪಿಸಿದೆ.

ನಟ ಪ್ರಕಾಶ್ ರೈ ಕಳೆದ ಕೆಲವು ವರ್ಷಗಳಿಂದ ಕೇಂದ್ರದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ. ಹಲವು ಸಂದರ್ಭಗಳಲ್ಲಿ ಮೋದಿ ಸರ್ಕಾರದ ನೀತಿಗಳನ್ನು ಟೀಕಿಸುತ್ತಲೇ ಬಂದಿದ್ದಾರೆ. ಇಂತಹ ಹೊತ್ತಿನಲ್ಲಿ ಕೇಂದ್ರ ತನಿಖಾ ಸಂಸ್ಥೆ ಇಡಿ ಪ್ರಕಾಶ್ ರಾಜ್ ಅವರನ್ನು ಟಾರ್ಗೆಟ್ ಮಾಡಿರುವುದು ಗಮನಾರ್ಹ ಎನ್ನುತ್ತಾರೆ ರಾಜಕೀಯ ವಿಶ್ಲೇಷಕರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page