Thursday, June 19, 2025

ಸತ್ಯ | ನ್ಯಾಯ |ಧರ್ಮ

ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 1 ವಿಶ್ವವಿದ್ಯಾಲಯ ನಿರ್ಮಾಣದ ಕನಸು: ರಾಜ್ಯ ಸರ್ಕಾರ ಸಂಕಲ್ಪ

ಬೆಂಗಳೂರು: ಶಿಕ್ಷಣ ಸಹಿತ ಎಲ್ಲ ರಂಗಗಳಲ್ಲೂ ನವ-ಕರ್ನಾಟಕದ ನಿರ್ಮಾಣಕ್ಕಾಗಿ ಸುಸ್ಥಿರತೆ ಮತ್ತು ಸಮಾನತೆಯಿಂದ ಕೂಡಿದ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ.ಎನ್‌.ಅಶ್ವಥ್‌ ನಾರಾಯಣ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, 2020ರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ಮುಂಚೂಣಿಯಲ್ಲಿದೆ. ಹೀಗಾಗಿ ಶೈಕ್ಷಣಿಕ ವಲಯದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ನಮ್ಮ ಬಿಜೆಪಿ ಸರ್ಕಾರ ಸದಾ ಬದ್ಧ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಸಚಿವ ಅಶ್ವಥ್‌ ನಾರಯಣ ಅವರು, ರಾಜ್ಯದಲ್ಲಿ ನೂತನವಾಗಿ 8 ವಿಶ್ವ ವಿದ್ಯಾಲಯಗಳ ಸ್ಥಾಪನೆಗೆ ಅನುವಾಗಲು ‘ಕರ್ನಾಟಕ ವಿಶ್ವ ವಿದ್ಯಾಲಯಗಳ ಕಾಯ್ದೆ-2000’ರ ತಿದ್ದುಪಡಿಗಾಗಿ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರುವುದಕ್ಕಾಗಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇದರ ಜೊತೆಗೆ ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 1 ವಿಶ್ವವಿದ್ಯಾಲಯವಾದರೂ ಇರಬೇಕೆನ್ನುವ ಸಂಕಲ್ಪ ನಮ್ಮದು ಎಂದು ಟ್ವೀಟ್‌ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page