ಹಾಸನ ಜಿಲ್ಲೆಯಲ್ಲಿ ಧಾರ್ಮಿಕ ಕ್ರಿಯೆ ನಡೆಸಲು ತನ್ನ ಬಳಿಗೆ ಬಂದ 29 ವರ್ಷದ ಮಹಿಳೆಯ ಮೇಲೆ ದೇವಸ್ಥಾನದ ಅರ್ಚಕನೊಬ್ಬ ಅತ್ಯಾಚಾರವೆಸಗಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ ಎಂಬುವನನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅರಸೀಕೆರೆ ತಾಲೂಕಿನ ಗೊಲ್ಲರಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯನೂ ಆಗಿರುವ ಆರೋಪಿ ದಯಾನಂದ, ಹಾಸನದ ಪುರದಮ್ಮ ದೇವಾಲಯದಲ್ಲೂ ಪೂಜೆ ಮಾಡುತ್ತಿದ್ದ, ಅಷ್ಟೇ ಅಲ್ಲದೇ ಜಯಕರ್ನಾಟಕ ಸಂಘಟನೆಯಲ್ಲೂ ತೊಡಗಿಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಿಳೆಗೆ ‘ನಕ್ಷತ್ರಗಳಲ್ಲಿ ದೋಷವಿದೆ’ ಎಂದು ಹೇಳಿದ ನಂತರ ಅರ್ಚಕರನ್ನು ಸಂಪರ್ಕಿಸಲು ಸಲಹೆ ನೀಡಲಾಯಿತು. ಬೇರೆ ರೀತಿಯಲ್ಲಿ ಹೇಳುವುದಾದರೆ, ಅವಳ ಜಾತಕ ದೋಷವಾಗಿತ್ತು. ಆದರೆ ಆತ ಜು.26ರಂದು ವಿಶೇಷ ಪೂಜೆ ನೆಪದಲ್ಲಿ ಭೇಟಿಯಾಗಿ, ಉಪ್ಪಾರಪೇಟೆ ವ್ಯಾಪ್ತಿಯ ಲಾಡ್ಜ್ವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಖಾಸಗಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದ. ಈ ಪೋಟೊಗಳನ್ನು ಕಳುಹಿಸಿ ಬ್ಲ್ಯಾಕ್ಮೇಲ್ ಮಾಡಿ 1.20 ಲಕ್ಷ ರೂ. ಪಡೆದಿದ್ದ. ತನ್ನನ್ನು ಮದುವೆಯಾಗದಿದ್ದರೆ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿಹರಿಬಿಡುವುದಾಗಿ ಬೆದರಿಕೆಯೊಡ್ಡಿದ್ದ,” ಎಂದು ಸಂತ್ರಸ್ತೆ ಜು.29ರಂದು ನೀಡಿದ್ದ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಈಗಾಗಲೇ ಬಂಧಿತ ಆರೋಪಿಯಿಂದ ಮೊಬೈಲ್ ಜಪ್ತಿ ಮಾಡಲಾಗಿದೆ. ಈ ಹಿಂದೆ ಇದೇ ರೀತಿಯ ಕೃತ್ಯ ಎಸಗಿದ್ದಾನೆಯೇ ಎಂಬುದರ ಪರಿಶೀಲನೆ ಮಾಡಲಾಗುತ್ತದೆ ಎಂದೂ ಪೊಲೀಸರು ತಿಳಿಸಿದ್ದಾರೆ.