Thursday, June 19, 2025

ಸತ್ಯ | ನ್ಯಾಯ |ಧರ್ಮ

ಅಯೋಧ್ಯೆಯಲ್ಲಿ ಭೀಕರ ಘಟನೆ: ಅರ್ಚಕ ಹತ್ಯೆ

ನವದೆಹಲಿ: ಅಯೋಧ್ಯೆಯಲ್ಲಿ ಅತ್ಯಂತ ಕೆಟ್ಟ ಘಟನೆ ನಡೆದಿದೆ. ರಾಮಜನ್ಮಭೂಮಿಯಲ್ಲಿರುವ ಪ್ರಸಿದ್ಧ ಹನುಮಾನ್ ಗರ್ಹಿ ದೇವಸ್ಥಾನದ ಅರ್ಚಕನನ್ನು ಅಪರಿಚಿತ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಂದಿದ್ದಾರೆ.

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ರಾಜ್ ಕರಣ್ ನಯ್ಯರ್ ಪ್ರಕಾರ “ಪೂಜಾರಿ ರಾಮ್ ಸಹರೆ ದಾಸ್ (44) ಹನುಮಾನ್ ಗರ್ಹಿ ದೇವಸ್ಥಾನದಲ್ಲಿ ಪೂಜೆಗಳನ್ನು ನಡೆಸುತ್ತಾರೆ. ಅವರು ತಮ್ಮ ಇಬ್ಬರು ಶಿಷ್ಯರೊಂದಿಗೆ ದೇವಸ್ಥಾನದ ಪಕ್ಕದ ಕೋಣೆಯಲ್ಲಿ ತಂಗುತ್ತಾರೆ. ರಾಮ ಜನ್ಮಭೂಮಿ ಆವರಣದ ತೀವ್ರ ಭದ್ರತಾ ವಲಯದ ಕೊಠಡಿಯಲ್ಲಿ ರಾಮ್ ಸಹಾರೆ ಶವವಾಗಿ ಬಿದ್ದಿದ್ದರು.”

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಅವರನ್ನು ಕತ್ತು ಕೊಯ್ದು ಕೊಲೆ ಮಾಡಿರುವುದು ಪೊಲೀಸರಿಗೆ ಗೊತ್ತಾಗಿದೆ. ಚೆನ್ನಾಗಿ ತಿಳಿದವರೇ ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆಯಲ್ಲಿ ತನಿಖೆ ನಡೆಸಲಾಗುತ್ತಿದೆ.

ಇಂದು ಬೆಳಗ್ಗೆ 7 ಗಂಟೆಗೆ ಈ ದುಷ್ಕೃತ್ಯ ನಡೆದಿದೆ ಎಂದು ಪೊಲೀಸರಿಗೆ ಮಾಹಿತಿ ಲಭಿಸಿದೆ. ರಾಮ್ ಸಹಾರೆ ಪೂಜೆಗೆ ಬಾರದೇ ಇದ್ದುದರಿಂದ ಅವರ ಸಹ ಅರ್ಚಕರು ಅವರನ್ನು ಹುಡುಕಲು ಹೋದಾಗ ಮೃತದೇಹ ಪತ್ತೆಯಾಗಿದೆ. ದಾಳಿಕೋರರು ಹರಿತವಾದ ಆಯುಧದಿಂದ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ನಿನ್ನೆ ರಾತ್ರಿ ಅರ್ಚಕ ಹಾಗೂ ಆತನ ಶಿಷ್ಯರ ನಡುವೆ ಘರ್ಷಣೆ ನಡೆದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಅರ್ಚಕರ ಶಿಷ್ಯರೇ ಕೊಲೆ ಮಾಡಿರಬಹುದು ಎಂಬ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮತ್ತೊಬ್ಬ ಶಿಷ್ಯ ಓಡಿಹೋದ. ನಾಲ್ಕು ಪೊಲೀಸ್ ತಂಡಗಳು ಆತನನ್ನು ಬೆನ್ನಟ್ಟಿ ಬೇಟೆಯಾಡುತ್ತಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page