Friday, June 20, 2025

ಸತ್ಯ | ನ್ಯಾಯ |ಧರ್ಮ

ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ: ಪ್ರಸನ್ನಾನಂದ ಸ್ವಾಮಿಯವರನ್ನ ಬೇಟಿಯಾದ ಸಿದ್ದರಾಮಯ್ಯ

ಬೆಂಗಳೂರು: ಮೀಸಲಾತಿ ಪ್ರಮಾಣ ಹೆಚ್ಚಳ ಹಾಗೂ ನ್ಯಾಯಮೂರ್ತಿ ನಾಗಮೋಹನದಾಸ್ ಅವರ ವರದಿ ಜಾರಿಗೆ ಆಗ್ರಹಿಸಿ ಧರಣಿ ಕುಳಿತಿರುವ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ಮಾಡಿದ್ದಾರೆ.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿಯವರು ನಡೆಸುತ್ತಿರುವ ಧರಣಿಯ ಬಳಿ ಸಿದ್ದರಾಮಯ್ಯ ಅವರು ಬೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ  ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿ ಮತ್ತು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಹಾಜರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page