Thursday, June 19, 2025

ಸತ್ಯ | ನ್ಯಾಯ |ಧರ್ಮ

ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಪ್ರತಿಭಟನೆ; ಹಿಂಸಾಚಾರಕ್ಕೆ ತಿರುಗಿದ ಬಂದ್

ಮುಂಬೈ: ಮಹಾರಾಷ್ಟ್ರದಲ್ಲಿ ಸಂವಿಧಾನದ ಪ್ರತಿಕೃತಿ ಧ್ವಂಸ ಖಂಡಿಸಿ ಪ್ರತಿಭಟನಾಕಾರರು ಕರೆ ನೀಡಿದ್ದ ಬಂದ್ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನಾಕಾರರು ಹಲವು ವಾಹನಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಿದರು.

ಹಿಂಸಾಚಾರವನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದರು. ಈ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ. ರೈಲ್ವೆ ನಿಲ್ದಾಣದ ಅಂಬೇಡ್ಕರ್ ಪ್ರತಿಮೆ ಎದುರು ಗಾಜಿನ ಪೆಟ್ಟಿಗೆಯಲ್ಲಿ ಇರಿಸಲಾಗಿದ್ದ ಸಂವಿಧಾನದ ಪ್ರತಿಕೃತಿಯನ್ನು ವ್ಯಕ್ತಿಯೊಬ್ಬ ಮಂಗಳವಾರ ಸಂಜೆ ಧ್ವಂಸಗೊಳಿಸಿದ್ದಾನೆ. ಆರೋಪಿ ಮೂರ್ತಿಜಾಪುರ ಗ್ರಾಮದ ಸೊಪನ್ ಪವಾರನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ನಡುವೆ, ಈ ಘಟನೆಯನ್ನು ವಿರೋಧಿಸಿ ಬುಧವಾರ ಪರ್ಭಾನಿ ಜಿಲ್ಲೆಯಲ್ಲಿ ಬಂದ್ ನಡೆಸಲಾಯಿತು. ಮೊದಲಿಗೆ ಶಾಂತಿಯುತವಾಗಿ ನಡೆದ ಪ್ರತಿಭಟನೆ ನಂತರ ಹಿಂಸಾಚಾರಕ್ಕೆ ತಿರುಗಿತು. ಪ್ರತಿಭಟನಾಕಾರರು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದರು. ಅವರು ಕಲ್ಲು ತೂರಾಟ ನಡೆಸಿದರು. ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿದ ನಂತರ ಪ್ರತಿಭಟನಾಕಾರರು ಚದುರಿದರು. ಪರ್ಭಾನಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಜಿಲ್ಲಾಧಿಕಾರಿಗಳು ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಶಾಂತಿ ಸುವ್ಯವಸ್ಥೆಗೆ ಕ್ರಮಗಳ ಕುರಿತು ಚರ್ಚಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page