Home ರಾಜ್ಯ ಶಿವಮೊಗ್ಗ ಯಡಿಯೂರಪ್ಪನವರ ಮಗ ಎನ್ನುವ ಹೆಮ್ಮೆಯಿದೆ, ಅಹಂಕಾರವಿಲ್ಲ: ಬಿ ವೈ ವಿಜಯೇಂದ್ರ

ಯಡಿಯೂರಪ್ಪನವರ ಮಗ ಎನ್ನುವ ಹೆಮ್ಮೆಯಿದೆ, ಅಹಂಕಾರವಿಲ್ಲ: ಬಿ ವೈ ವಿಜಯೇಂದ್ರ

0

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಎಂಬ ಹೆಮ್ಮೆ ನನಗಿದೆ ಆದರೆ ದುರಹಂಕಾರವಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಂಗಳವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಪಕ್ಷದ ಹಿತದೃಷ್ಟಿಯಿಂದ ಹಿರಿಯ ನಾಯಕರ ಟೀಕೆಗಳನ್ನು ಬಹಳಷ್ಟು ಸಹಿಸಿಕೊಂಡಿದ್ದೇನೆಯೇ ಹೊರತು ಹಿರಿಯ ನಾಯಕರನ್ನು ಕಡೆಗಣಿಸಿಲ್ಲ ಎಂದು ಪುನರುಚ್ಚರಿಸಿದರು. ರಾಜ್ಯದಲ್ಲಿ ಪಕ್ಷವನ್ನು ಬೇರೆ ಪಕ್ಷಗಳ ಸಹಾಯವಿಲ್ಲದೆ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ ಅವರು, ದೇಶವನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮೋದಿ ಸಂಕಲ್ಪ ಮಾಡಿದ್ದಾರೆ. ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಸೆಪ್ಟೆಂಬರ್ 17 ರಂದು ಮೋದಿ ಅವರ ಜನ್ಮದಿನದ ಜೊತೆಗೆ 100 ದಿನಗಳನ್ನು ಪೂರೈಸಿದೆ. ಮೋದಿಯವರು ಸುಧಾರಿತ ಆಡಳಿತವನ್ನು ನೀಡಿದ್ದಾರೆ ಮತ್ತು ಕಳೆದ ಹತ್ತು ವರ್ಷಗಳಲ್ಲಿ ಎಲ್ಲಾ ಸಮುದಾಯಗಳ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಪ್ರತಿಪಾದಿಸಿದರು. ಪ್ರಗತಿಯ ವೇಗವನ್ನು ಗಮನಿಸಿದರೆ, ಭಾರತವು 2047ರ ವೇಳೆಗೆ ವಿಶ್ವದ ಪ್ರಬಲ ರಾಷ್ಟ್ರವಾಗಲಿದೆ ಎಂದು ಅಭಿಪ್ರಾಯಪಟ್ಟರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯಡಿ ಕೇಂದ್ರವು 20,000 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದ್ದು, ದೇಶದ 9.3 ಕೋಟಿ ರೈತರು ಇದರ ಪ್ರಯೋಜನ ಪಡೆಯಲಿದ್ದಾರೆ ಎಂದರು.

ಆಯುಷ್ಮಾನ್ ಭಾರತ್ ಯೋಜನೆಯಡಿ ಜನರು ರೂಪಾಯಿ 5 ಲಕ್ಷ ಮೊತ್ತದ ಆರೋಗ್ಯ ವಿಮೆಯನ್ನು ಪಡೆಯಬಹುದು ಮತ್ತು ಇದರಿಂದಾಗಿ ದೇಶಾದ್ಯಂತದ ಜನರಿಗೆ ಸಹಾಯವಾಗುತ್ತಿದೆ ಎಂದು ಅವರು ಹೇಳಿದರು.

You cannot copy content of this page

Exit mobile version