Tuesday, January 27, 2026

ಸತ್ಯ | ನ್ಯಾಯ |ಧರ್ಮ

ಕ್ಯೂಆರ್‌ ಕೋಡ್‌ ಇರುವ ಹಸಿರು ಪಟಾಕಿಗಳನ್ನು ಮಾತ್ರವೇ ಮಾರಾಟ : ಕಲ್ಕತ್ತಾ ಹೈಕೋರ್ಟ್

ಕಲ್ಕತ್ತಾ : ದೀಪಾವಳಿ ಹಬ್ಬವು ಹತ್ತಿರ ಬರುತ್ತಿರುವಾಗಲೇ ಕ್ಯೂಆರ್‌ ಕೋಡ್‌ ಇರುವ ಹಸಿರು ಪಟಾಕಿಗಳನ್ನು ಮಾತ್ರವೇ ಮಾರಾಟ  ಮಾಡುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಡಿಕೊಳ್ಳಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರ ಮತ್ತು ಗೆ ಕಲ್ಕತ್ತಾ ಹೈಕೋರ್ಟ್‌ ಆದೇಶ ನೀಡಿದೆ.

ಪಟಾಕಿಗಳ ಮಾರಾಟ ಮತ್ತು ಬಳಕೆ ಮೇಲೆ ಇರುವ ನಿರ್ಬಂಧಗಳ ಕುರಿತು ಜನಕ್ಕೆ ಜಾಗೃತಿ ಮೂಡಿಸಲು ಜಾಹೀರಾತು ಮತ್ತು ಪ್ರಕಟಣೆ ನೀಡಬೇಕು ಎಂದು ನ್ಯಾಯಮೂರ್ತಿಗಳಾದ ಅಪೂರ್ಬ ಸಿನ್ಹಾ ರೇ ಮತ್ತು ಜಾಯ್‌ ಮಾಲ್ಯ ಬಾಗ್ಚಿ ಅವರ ಪೀಠ ಹೇಳಿದೆ.

ದೀಪಾವಳಿ ಹಬ್ಬದ ಕುರಿತು ʼದೀಪಗಳ ಹಬ್ಬವು ಕಳವಳಕ್ಕೆ ಕಾರಣವಾಗಬಾರದು ಎಂಬುದು ನಮ್ಮ ಭಾವನೆ ಮತ್ತು ನಂಬಿಕೆಯಾಗಿದೆ. ಮಾಲಿನ್ಯ ರಾಕ್ಷಸ ನಮ್ಮ ಗಾಳಿಯನ್ನು ವಿಷಪೂರಿತಗೊಳಿಸಿ ಜನರ ಆರೋಗ್ಯಕ್ಕೆ ಸರಿಪಡಿಸಲಾಗದ ಹಾನಿ ಉಂಟುಮಾಡುವಂತಾಗಬಾರದುʼ ಎಂದು ನ್ಯಾಯಾಲಯ ಹೇಳಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page