Home ದೇಶ ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡಲಾಗದವರು ಇತರರಿಗೆ ದಾರಿ ಬಿಟ್ಟುಕೊಡಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನಿರೀಕ್ಷಿತ ರೀತಿಯಲ್ಲಿ ಕೆಲಸ ಮಾಡಲಾಗದವರು ಇತರರಿಗೆ ದಾರಿ ಬಿಟ್ಟುಕೊಡಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

0

ನಿರೀಕ್ಷಿತ ಮಟ್ಟದಲ್ಲಿ ಪಕ್ಷದ ಕೆಲಸಗಳನ್ನು ಮಾಡಲಾಗದವರು ತಮ್ಮ ಪದವಿಯನ್ನು ತ್ಯಜಿಸಿ ಉಳಿದವರಿಗೆ ದಾರಿ ಮಾಡಿಕೊಡಬೇಕೆಂದು ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಪಕ್ಷ ಮತ್ತು ದೇಶದ ಕುರಿತಾಗಿ ಕಾಂಗ್ರೆಸ್ ನಾಯರಿಗೆ ಇರುವ ದೊಡ್ಡ ಜವಾಬ್ದಾರಿಯೆಂದರೆ ಎಲ್ಲಾ ಹಂತಗಳಲ್ಲಿ ಪಕ್ಷವನ್ನು ಸಂಘಟಿಸುವುದು ಎಂದು ಅವರು ಹೇಳಿದರು.

ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಸಂಚಾಲನಾ ಸಮಿತಿ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು. ಕಾಂಗ್ರೆಸ್‌ನಲ್ಲಿ ಕೆಲವು ಜವಾಬ್ದಾರಿಯುತ ಪದಾಧಿಕಾರಿಗಳು ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಿದ್ದರೆ, ಇನ್ನು ಕೆಲವರು ತಮ್ಮ ಜವಾಬ್ದಾರಿಯ ಕೊರತೆಯನ್ನು ನಿರ್ಲಕ್ಷಿಸಿ ಸುಮ್ಮನಾಗುತ್ತಾರೆ ಎಂದು ಭಾವಿಸಿದ್ದಾರೆ ಎಂದು ಖರ್ಗೆ ಹೇಳಿದರು.

ಇದು ಸರಿಯೂ ಅಲ್ಲ, ಸ್ವೀಕಾರಾರ್ಹವೂ ಅಲ್ಲ, “ತಮ್ಮ ಜವಾಬ್ದಾರಿಯನ್ನು ಪೂರೈಸಲು ಸಾಧ್ಯವಾಗದವರು, ತಮ್ಮ ಸಹೋದ್ಯೋಗಿಗಳಿಗೆ ದಾರಿ ಮಾಡಿಕೊಡಬೇಕಾಗುತ್ತದೆ” ಎಂದು ಕಾಂಗ್ರೆಸ್ ಅಧ್ಯಕ್ಷರು ಹೇಳಿದ್ದಾರೆ.

“ಕಾಂಗ್ರೆಸ್ ಸಂಘಟನೆಯು ಬಲಿಷ್ಠವಾಗಿದ್ದರೆ, ಜವಾಬ್ದಾರಿಯುತವಾಗಿದ್ದರೆ, ಜನರ ನಿರೀಕ್ಷೆಗಳನ್ನು ಪೂರೈಸಿದರೆ ಮಾತ್ರವೇ ನಾವು ಚುನಾವಣೆಯಲ್ಲಿ ಗೆದ್ದು ದೇಶದ ಜನರ ಸೇವೆ ಮಾಡಲು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಭಾರತ್‌ ಜೋಡೋ ಯಾತ್ರೆ ಕುರಿತು ಮಾತನಾಡಿದ ಅವರು ಭಾರತ್‌ ಜೋಡೋ ಯಾತ್ರೆಯು ಭಾರತದಲ್ಲಿ ಇತಿಹಾಸ ಸೃಷ್ಟಿಸುತ್ತಿದೆ ಎಂದರು. ಭಾರತ್‌ ಜೋಡೋ ಯಾತ್ರೆಯು ಈಗಾಗಲೇ 2,000 ಕಿಲೋಮೀಟರ್‌ ದೂರವನ್ನು ಕ್ರಮಿಸಿದ್ದು ಮುಂದಿನ ಮಾರ್ಚ್‌ ತಿಂಗಳ ವೇಳೆಗೆ 3,500 ಕಿಲೋಮೀಟರ್‌ ದೂರವನ್ನು ಕ್ರಮಿಸಲಿದೆ.

You cannot copy content of this page

Exit mobile version