Saturday, June 21, 2025

ಸತ್ಯ | ನ್ಯಾಯ |ಧರ್ಮ

ರೈಲ್ವೆ ಪೊಲೀಸ್ರ ಕಿರುಕುಳದಿಂದ ರಕ್ಷಿಸುವಂತೆ ಚಿಂದಿ ಆಯುವವರಿಂದ ಡಿಸಿ ಕಛೇರಿ ಮುಂದೆ ಪ್ರತಿಭಟನೆ

ಹಾಸನ: ಕರ್ನಾಟಕದ ಯಶವಂತಪುರದ ರೈಲ್ವೆ ಪೊಲೀಸ್ ಮತ್ತು ಹಾಸನದ ರೈಲ್ವೆ ಪೊಲೀಸರು ಪರಿಶಿಷ್ಟ ಪಂಗಡದವರಾದ ನಮ್ಮಗಳ ಮೇಲೆ ಕಿರುಕುಳ ದೌರ್ಜನ್ಯ ನಡೆಸುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗುಜರಿ ವ್ಯಾಪಾರಸ್ತರು ಹಾಗೂ ರಸ್ತೆ, ಪುಟ್ಬಾತ್ ನಲ್ಲಿ ಪ್ಲಾಸ್ಟಿಕ್, ಚಿಂದಿ ಮತ್ತು ಇತರೆ ವಸ್ತು ಸಂಗ್ರಹಿಸಿ ಗುಜರಿ ಅಂಗಡಿಗೆ ವ್ಯಾಪಾರ ಮಾಡುವವರು ಬುಧವಾರದಂದು ಡಿಸಿ ಕಛೇರಿ ಆವರಣದಲ್ಲಿ ಪ್ರತಿಭಟಿಸಿ ಎರಡನೇ ಬಾರಿಗೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.


ಇದೆ ವೇಳೆ ಇತರರು ಮಾಧ್ಯಮದೊಂದಿಗೆ ಸಯ್ಯಾದ್ ರೆಮನ್ ಮಾತನಾಡಿ, ನಾನು ಮತ್ತು ನಮ್ಮ ಗ್ರಾಮದ ಕಾಳ ಮತ್ತು ಇತರರು ನಮ್ಮ ವೃತ್ತಿಯಿಂದ ಗುಜರಿ ವ್ಯಾಪಾರವನ್ನು ಸುಮಾರು 10 ವರ್ಷದಿಂದ ಮಾಡುತ್ತಿದ್ದು, ಇದೇ ವೃತ್ತಿಯಿಂದ ನಮ್ಮ ಕುಟುಂಬದ ನಿರ್ವಹಣೆ ಮತ್ತು ಮಕ್ಕಳ ವಿದ್ಯಾಭ್ಯಾಸವನ್ನು ಮಾಡುತ್ತಿರುತ್ತೇವೆ. ನಮ್ಮ ಗ್ರಾಮದಲ್ಲಿ ವಾಸ ಮಾಡುತ್ತಿರುವ ನಾವುಗಳು ಪರಿಶಿಷ್ಟ ಪಂಗಡಕ್ಕೆ ಸೇರಿದ ಜನಾಂಗವಾಗಿದ್ದು, ಆರ್ಥಿಕವಾಗಿ ಹಿಂದುಳಿದಿರುತ್ತೇವೆ. ಹೀಗೆ ವೃತ್ತಿಯನ್ನು ಕಷ್ಟುಪಟ್ಟು ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಕರ್ನಾಟಕದ ಯಶವಂತಪುರ ಹಾಗೂ ಹಾಸನದ ರೈಲ್ವೆ ಪೊಲೀಸರು ರೈಲಿಗೆ ಸಂಬAಧಿಸಿದ ಉಪಕರಣಗಳನ್ನು ಖರೀದಿ ಮಾಡಿರುತ್ತೀರಾ ಎಂದು ಪದೇ ಪದೇ ಕಿರುಕುಳ ನೀಡಿ ನಮ್ಮಿಂದ ಹಣ ಪಡೆಯುತ್ತಿರುತ್ತಾರೆ. ಇದೇ ರೀತಿ ಇಲ್ಲಿನ ಪೊಲೀಸರು ಹಣ ವಸೂಲಿ ಮಾಡುತ್ತಿದ್ದು, ನಾವು ದುಡಿದಂತಹ ಹಣವನ್ನೆಲ್ಲಾ ಈ ಮೇಲ್ಕಂಡ ಪೊಲೀಸರಿಗೆ ಕೊಡುತ್ತಿದ್ದು, ಬಡ್ಡಿ ಸಾಲ ಮಾಡಿ ಹಣ ನೀಡಿರುತ್ತೇವೆ ಎಂದರು. ಹೀಗಿರುವಲ್ಲಿ ಕಳೆದ ಎರಡು ದಿನಗಳ ಹಿಂದೆ ಇದೇ ಕರ್ನಾಟಕ ರೈಲ್ವೆ ಪೊಲೀಸರಾದ ಯಶವಂತಪುರ ಹಾಗೂ ಹಾಸನದ ರೈಲ್ವೆ ಪೊಲೀಸರಾದ ಖಲೀಲ್, ಜಾವೀದ್, ಎ.ಎಸ್.ಐ ರವಿ ಹಾಗೂ ಇತರರ ನಮ್ಮ ಗ್ರಾಮದ ಹುಡುಗರನ್ನು ಕರೆದುಕೊಂಡು ರೈಲ್ವೆ ಮಾಲನ್ನು ತೆಗೆದುಕೊಂಡಿದ್ದೀರಾ ಎಂದು ಕಿರುಕುಳ ನೀಡುತ್ತಿದ್ದು, ಇವರ ಕಿರುಕುಳದಿಂದ ನಮ್ಮ ಗ್ರಾಮದ ಕಾಳ ರವರು ಆತ್ಮಹತ್ಯೆ ಮಾಡಿಕೊಳ್ಳಲು ಬೆಂಕಿ ಹಚ್ಚಿಕೊಂಡು ಗಾಯಗೊಂಡು ಈಗ ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುತ್ತಾರೆ. ಅಲ್ಲದೆ ಅರ್ಮಾನ್ ಬಿನ್ ಸಮೀರ್ ಪಾಷಾ ಇವರನ್ನು ಸಹ 4 ದಿನಗಳ ಹಿಂದೆ ಕರೆದುಕೊಂಡು ಅವರಿಗೆ ಕಿರುಕುಳ ನೀಡುತ್ತಿದ್ದು, ಅವರ ಬಗ್ಗೆ ಮಾಹಿತಿ ಕೇಳಿದರೆ ನನಗೆ ಗೊತ್ತಿಲ್ಲ ಎಂದು ತಿಳಿಸುತ್ತಿರುತ್ತಾರೆ. ಪ್ರತಿ ಬಾರಿ ರೈಲ್ವೆ ಪೋಲೀಸರು ಪರಿಶಿಷ್ಟ ಪಂಗಡದವರಾದ ನಮ್ಮಗಳ ಮೇಲೆ ದೌರ್ಜನ್ಯ ನಡೆಸುತ್ತಿರುತ್ತಾರೆ ಎಂದು ಗಂಭೀರವಾಗಿ ಆರೋಪಿಸಿದರು. ಕಿರುಕುಳ ನೀಡುತ್ತಿರುವ ಇವರ ವಿರುದ್ದ ಕ್ರಮ ಕೈಗೊಂಡು ನಮಗೆ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕಾಗಿ ಮನವಿ ಮಾಡಿದರು.
ಪ್ರತಿಭಟನೆಯಲ್ಲಿ ಆಲೂರು ತಾಲೂಕು ಹುಣುಸೆವಳ್ಳಿ ಗ್ರಾಮದ ನವಾಜ್, ತೋಫಿಕ್ ಪಾಷಾ, ರಾಜು, ವಸಂತ, ಆಶಾ, ಗೀತಾ, ಶಾಂತಿ, ಲೀಲಾ, ರತ್ನ, ಆರತಿ, ಮಂಜೂಳಾ, ಪ್ರಿಯಾ, ವಿಜಯ, ಧನುಷ್, ಗಣೇಶ್, ಕಾನೇಶ್, ಸುಮಿತ್ರಾ, ಅಭಿಮಾನ್, ಪವನ್, ತಾರಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page