Tuesday, June 18, 2024

ಸತ್ಯ | ನ್ಯಾಯ |ಧರ್ಮ

ಶಂಕರ್ ಕೋನಮಾನಹಳ್ಳಿ ನಿರ್ದೇಶನದ ಹೊಸಚಿತ್ರದಲ್ಲಿ ರಾಗಿಣಿ ದ್ವಿವೇದಿ

ಬೆಂಗಳೂರು: ತೆರೆಗೆ ಬರಲು ಸಿದ್ದವಾಗಿರುವ ವಿಭಿನ್ನ ಕಥಾಹಂದರದ “ಶಂಭೋ ಶಿವ ಶಂಕರ” ಚಿತ್ರವನ್ನು ಶಂಕರ್ ಕೋನಮಾನಹಳ್ಳಿ ನಿರ್ದೇಶಿಸಿದ್ದಾರೆ.

ಈ ಚಿತ್ರ ತೆರೆಗೆ ಬರುವ ಮುಂಚೆಯೇ ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಎರಡನೇ  ಚಿತ್ರವನ್ನು ನಿರ್ದೇಶಿಸುವ ತಯಾರಿಯಲ್ಲಿದ್ದಾರೆ.

ನಿರ್ದೇಶಕ ಶಂಕರ್ ಕೋನಮಾನಹಳ್ಳಿ

ತಮ್ಮ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ರಾಗಿಣಿ ದ್ವಿವೇದಿ, ಈ ಚಿತ್ರದ ನಾಯಕಿಯಾಗಿ ನಟಿಸಲಿದ್ದಾರೆ.

ಈ ನೂತನ ಚಿತ್ರದ ಚಿತ್ರೀಕರಣವನ್ನು ನವೆಂಬರ್ ನಲ್ಲಿ ಆರಂಭಿಸುವುದಾಗಿ ತಿಳಿಸಿರುವ ನಿರ್ದೇಶಕರು, ನಿರ್ಮಾಣ ಸಂಸ್ಥೆ, ಕಲಾವಿದರು ಹಾಗೂ ತಂತ್ರಜ್ಞರು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ನೀಡಲಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು