Saturday, June 15, 2024

ಸತ್ಯ | ನ್ಯಾಯ |ಧರ್ಮ

ದೇವಸ್ಥಾನಕ್ಕೆ ಪ್ರವೇಶ ನಿರಾಕರಣೆ: ಧರಣಿ ಕುಳಿತ ರಾಹುಲ್‌ ಗಾಂಧಿ

ನವದೆಹಲಿ: ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ನಡೆಸುತ್ತಿದೆ. ಕೆಲವೆಡೆ ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ ನಡೆದಿರುವ ಬಗ್ಗೆಯೂ ವರದಿಯಾಗಿದೆ. ಇಂದೂ ಕೂಡ ರಾಹುಲ್ ಗಾಂಧಿ ದೇಗುಲ ಪ್ರವೇಶದ ವಿಚಾರವಾಗಿ ಗದ್ದಲ ಎದ್ದಿದೆ.

ದೇವಸ್ಥಾನದ ಒಳಗೆ ಬಿಡದ ಕುರಿತು ಅಸ್ಸಾಮ್‌ ಸರ್ಕಾರವನ್ನು ಗುರಿಯಾಗಿಸಿಕೊಂಡು ರಾಹುಲ್‌ ಗಾಂಧಿ ಟೀಕೆಗಳನ್ನು ಮಾಡಿದ್ದಾರೆ.

ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿರುವ ವೈಷ್ಣವ ಸಂತ ಶಂಕರದೇವ್ ಜನ್ಮಸ್ಥಳಕ್ಕೆ ಭೇಟಿ ನೀಡಲು ರಾಹುಲ್ ಗಾಂಧಿ ಅಲ್ಲಿಗೆ ಬಂದಿದ್ದರು. ಆದರೆ ಅವರನ್ನು ಅಲ್ಲಿ ತಡೆದು ನಿಲ್ಲಿಸಲಾಯಿತು. ಅಸ್ಸಾಂನ ನಾಗಾಂವ್‌ನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡದಂತೆ ತಡೆದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಈಗ ಯಾರು ದೇವಸ್ಥಾನಕ್ಕೆ ಹೋಬೇಕು ಎಂಬುದನ್ನು ಕೂಡಾ ಪ್ರಧಾನಿ ಮೋದಿ ನಿರ್ಧರಿಸುತ್ತಾರೆಯೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ನಾವು ಯಾವುದೇ ಸಮಸ್ಯೆ ಸೃಷ್ಟಿಸಲು ಬಯಸುವುದಿಲ್ಲ, ದೇವಸ್ಥಾನದಲ್ಲಿ ಪೂಜೆ ಮಾಡಲು ಬಯಸುತ್ತೇವೆ. ದೇವಸ್ಥಾನಕ್ಕೆ ಹೋಗದಂತೆ ತಡೆದ ನಂತರ ರಾಹುಲ್ ಗಾಂಧಿ ಇತರ ಕಾಂಗ್ರೆಸ್ ನಾಯಕರೊಂದಿಗೆ ಧರಣಿ ಕುಳಿತರು.

ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ

ಅಸ್ಸಾಂನಲ್ಲಿ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯ ಬೆಂಗಾವಲು ಪಡೆಗಳ ಮೇಲೆ ಆಪಾದಿತ ದಾಳಿಗೆ ಸಂಬಂಧಿಸಿದಂತೆ, ಈ ದಾಳಿಯನ್ನು ವಿರೋಧಿಸಿ ಸೋಮವಾರ ಸಂಜೆ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕಾಂಗ್ರೆಸ್ ಘೋಷಿಸಿದೆ. ಸಾಮಾಜಿಕ ಮಾಧ್ಯಮ ವೇದಿಕೆಯ ಪೋಸ್ಟ್‌ನಲ್ಲಿ ಅವರು ನಿರಂತರವಾಗಿ ದಾಳಿ ಮಾಡುತ್ತಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನೂ ಗಂಭೀರವಾಗಿ ಪರಿಗಣಿಸಬೇಕಾದ ವಿಷಯವಾಗಿದೆ ಏಕೆಂದರೆ ಇದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಫ್ಯಾಸಿಸಂ ಮತ್ತು ಗೂಂಡಾಗಿರಿಯನ್ನು ತೋರಿಸುತ್ತದೆ. ನಾಳೆ ಸಂಜೆ ಬೃಹತ್ ಪ್ರತಿಭಟನೆ ನಡೆಸಲು ಭಾರತದಾದ್ಯಂತ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಸೂಚಿಸಲಾಗಿದೆ ಮತ್ತು (ನರೇಂದ್ರ) ಮೋದಿ ನೇತೃತ್ವದ ಬಿಜೆಪಿಯು ಅಸ್ಸಾಂನಲ್ಲಿ ಪ್ರಜಾಪ್ರಭುತ್ವವನ್ನು ಹೇಗೆ ಕೊಲ್ಲುತ್ತಿದೆ ಎಂಬುದನ್ನು ಈ ಘಟನೆ ಎತ್ತಿ ತೋರಿಸುತ್ತದೆ ಎಂದು ಕಾಂಗ್ರೆಸ್‌ ಆರೋಪಿಸಿದೆ

ಇದಕ್ಕೂ ಮೊದಲು, ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಅಸ್ಸಾಂ ಕಾಂಗ್ರೆಸ್ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಅವರ ಮೇಲೆ ದಾಳಿ ನಡೆಸಲಾಯಿತು ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರ ಕಾರನ್ನು ಗುರಿಯಾಗಿಸಲಾಗಿತ್ತು. ಇದೀಗ ಅಸ್ಸಾಂನ ನಾಗಾಂವ್ ಜಿಲ್ಲೆಯ ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಭಾನುವಾರ ಸಂಜೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಜನಸಂದಣಿಯಿಂದ ಸುತ್ತುವರೆದಿದ್ದರು. ಜನಸಮೂಹವು ವಯನಾಡ್ ಸಂಸದರ ವಿರುದ್ಧ ಘೋಷಣೆಗಳನ್ನು ಕೂಗಿತು ಮತ್ತು ಸಮಗುರಿ ಕಾಂಗ್ರೆಸ್ ಶಾಸಕ ರಕಿಬುಲ್ ಹುಸೇನ್ ಅವರನ್ನು ಉಲ್ಲೇಖಿಸಿ ‘ಅನ್ಯಾಯ್ ಯಾತ್ರೆ’ ಮತ್ತು ‘ರಕಿಬುಲ್ ಗೋ ಬ್ಯಾಕ್’ ಎಂಬ ಘೋಷಣೆಗಳ ಫಲಕಗಳನ್ನು ಪ್ರದರ್ಶಿಸಿದರು.

ಇಂದು ರಾಮಮಂದಿರ ಉದ್ಘಾಟನೆ ನಡೆಯುತ್ತಿರುವುದರಿಂದ ಈ ಹೊತ್ತಿನಲ್ಲಿ ನಾವು ರಾಹುಲ್‌ ಗಾಂಧಿಯವರನ್ನು ಒಳಗೆ ಬಿಡಲು ಸಾಧ್ಯವಿಲ್ಲ. ನಾವು ಹಾಗೆ ಒಳಗೆ ಬಿಟ್ಟರೆ ಅಸ್ಸಾಮ್‌ ಕುರಿತು ದೇಶಕ್ಕೆ ಬೇರೆಯದೇ ಸಂದೇಶವನ್ನು ಕೊಟ್ಟಂತಾಗುತ್ತದೆ. ಮಧ್ಯಾಹ್ನ ಮೂರು ಗಂಟೆಯ ನಂತರ ಬೇಕಿದ್ದರೆ ರಾಹುಲ್‌ ದೇವಸ್ಥಾನ ಪ್ರವೇಶಿಸಲಿ ಎಂದು ದೇವಸ್ಥಾನದ ಆಡಳಿತ ಮಂಡಳಿ ಹೇಳಿಕೆ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು