Monday, January 12, 2026

ಸತ್ಯ | ನ್ಯಾಯ |ಧರ್ಮ

ಸಾವರ್ಕರ್ ಪ್ರಕರಣ: ಕೋರ್ಟಿಗೆ ಬಾರದ ರಾಹುಲ್ ಗಾಂಧಿಗೆ 200 ರೂ ದಂಡ

ಪ್ರಕರಣವೊಂದರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ನ್ಯಾಯಾಲಯವು 200 ರೂ. ದಂಡ ವಿಧಿಸಿದೆ. ವಿಚಾರಣೆಗಳಿಗೆ ಪದೇ ಪದೇ ಗೈರುಹಾಜರಾದ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಏಪ್ರಿಲ್ 14ರಂದು ನಡೆಯುವ ಮುಂದಿನ ವಿಚಾರಣೆಗೆ ರಾಹುಲ್ ಹಾಜರಾಗದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಯಿತು.

2022 ರಲ್ಲಿ ಮಹಾರಾಷ್ಟ್ರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ವೀರ್ ಸಾವರ್ಕರ್ ಒಬ್ಬ ಬ್ರಿಟಿಷ್ ಸೇವಕರಾಗಿದ್ದರು ಮತ್ತು ಅವರಿಂದ ಪಿಂಚಣಿ ಕೂಡ ಪಡೆದಿದ್ದರು ಎಂದು ಹೇಳಿದ್ದರು.

ಈ ಹೇಳಿಕೆಗಳು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಅವಹೇಳನ ಎಂದು ಆರೋಪಿಸಿ ನೃಪೇಂದ್ರ ಪಾಂಡೆ ಎಂಬ ವ್ಯಕ್ತಿ ಉತ್ತರ ಪ್ರದೇಶದ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ರಾಹುಲ್ ಅವರ ಹೇಳಿಕೆಗಳು ಸಮಾಜದಲ್ಲಿ ದ್ವೇಷವನ್ನು ಪ್ರಚೋದಿಸುವ ಉದ್ದೇಶವನ್ನು ಹೊಂದಿವೆ ಎಂದು ಅವರು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page