Monday, January 12, 2026

ಸತ್ಯ | ನ್ಯಾಯ |ಧರ್ಮ

ರಾಹುಲ್ ಗಾಂಧಿಗೆ ಷರತ್ತುಬದ್ಧ ಜಾಮೀನು ಮಂಜೂರು; ಡಿಕೆ ಸುರೇಶ್ ಕಡೆಯಿಂದ ಶ್ಯೂರಿಟಿ ಪಡೆದ ನ್ಯಾಯಾಲಯ

ಬಿಜೆಪಿ ಪಕ್ಷದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ, ದಿನಪತ್ರಿಕೆಗಳಿಗೆ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿಗೆ ಬೆಂಗಳೂರಿನ 42ನೇ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್‌ ಕೋರ್ಟ್‌ಗೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಷರತ್ತು ಬದ್ದ ಜಾಮೀನು ನೀಡಿದೆ.

ಜೊತೆಗೆ ಮುಂದಿನ ವಿಚಾರಣೆಯನ್ನು ಜುಲೈ 30ಕ್ಕೆ ಮುಂದೂಡಿದೆ. ಮಾಜಿ ಸಂಸದ ಡಿ.ಕೆ.ಸುರೇಶ್ ಅವರು 75 ಲಕ್ಷ ಮೌಲ್ಯದ ಆಸ್ತಿಯ ದಾಖಲೆಯನ್ನು ಶ್ಯೂರಿಟಿ ಆಗಿ ನೀಡಿದ್ದಾರೆ.

ಕೋರ್ಟ್ ವಿಚಾರಣೆಗೆ ಹಾಜರಾಗಲು ರಾಹುಲ್ ಸಹಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಸಮನ್ಸ್‌ ಜಾರಿ ಮಾಡಿತ್ತು. ಈ ಹಿಂದೆಯೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.1ರಂದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಖುದ್ದು ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದರು.

ರಾಹುಲ್‌ಗಾಂಧಿ 3ನೇ ಸಮನ್ಸ್‌ಗೂ ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ನ್ಯಾಯಾಧೀಶರು ವಿಚಾರಣೆಯನ್ನು ಜೂ.7ಕ್ಕೆ ಮುಂದೂಡಿದ್ದರು. ಇದರ ವಿಚಾರಣೆ ಇಂದು ನಡೆದು, ಕೋರ್ಟ್ ರಾಹುಲ್ ಗಾಂಧಿಯವರಿಗೆ ಜಾಮೀನು ಮಂಜೂರು ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page