Wednesday, June 25, 2025

ಸತ್ಯ | ನ್ಯಾಯ |ಧರ್ಮ

ಜಾರ್ಖಂಡ್ ರಾಜ್ಯದಲ್ಲಿ ರೈಲ್ವೇ ಹಳಿ ಬ್ಲಾಸ್ಟಿಂಗ್; ತಪ್ಪಿದ ದೊಡ್ಡ ಅಪಘಾತ..!

ಜಾರ್ಖಂಡ್‌ನ ಸಾಹಿಬ್‌ಗಂಜ್‌ ಬಳಿ ಅಪರಿಚಿತ ದುಷ್ಕರ್ಮಿಗಳು ರೈಲ್ವೆ ಹಳಿಯನ್ನು ಸ್ಫೋಟಿಸಿದ್ದಾರೆ. ಇದರಿಂದಾಗಿ ಆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡಿದೆ.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ, ಆಸ್ತಿಪಾಸ್ತಿ ನಷ್ಟವಾಗದ ಕಾರಣ ಎಲ್ಲರೂ ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ. ಸ್ಫೋಟದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ಸಂಚಿನ ಕುರಿತು ತನಿಖೆ ನಡೆಸಲಾಗುತ್ತಿದೆ. ಸಾಹಿಬ್‌ಗಂಜ್ ಜಿಲ್ಲೆಯ ಬರ್ಹೆತ್ ಪೊಲೀಸ್ ಠಾಣೆ ವ್ಯಾಪ್ತಿಯ ರಂಗ ಗುತ್ತು ಗ್ರಾಮದ ಬಳಿ ಲಾಲ್ಮಾಟಿಯಾದಿಂದ ಫರ್ಕಾವರೆಗಿನ ಎಂಜಿಆರ್ ರೈಲು ಮಾರ್ಗದಲ್ಲಿ ಅಪರಿಚಿತ ದುಷ್ಕರ್ಮಿಗಳು ಸ್ಫೋಟಕಗಳನ್ನು ಹಾಕಿದ್ದರು. ಈ ಘಟನೆಗೆ ಕಾರಣಗಳು ಸ್ಪಷ್ಟವಾಗಿಲ್ಲ.

ಸ್ಫೋಟದಿಂದಾಗಿ 39 ಮೀಟರ್ ದೂರಕ್ಕೆ ಹಳಿಗಳು ಹಾರಿಹೋಗಿವೆ. ರಂಗ ಗುತ್ತು ಗ್ರಾಮದ ಬಳಿಯ ಪೋಲ್ ಸಂಖ್ಯೆ 40/1ರ ಬಳಿ ನಡೆದಿದೆ. ಎಂಜಿಆರ್ ರೈಲು ಮಾರ್ಗದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸ್ಫೋಟದ ಸದ್ದು ಕೇಳಿಬಂದಿದೆ. ಸ್ಫೋಟ ಸಂಭವಿಸಿದ ಹಳಿಯಲ್ಲಿ ಕಲ್ಲಿದ್ದಲು ಸಾಗಿಸುತ್ತಿದ್ದ ಗೂಡ್ಸ್ ರೈಲು ಪೋಲ್ ಸಂಖ್ಯೆ 42/02‌ ಬಳಿ ನಿಂತಿತ್ತು.

ಮಾಹಿತಿ ಪಡೆದ ಎಸ್ಪಿ ಅಮಿತ್ ಕುಮಾರ್ ಸಿಂಗ್, ಬದರ್ವಾ ಡಿಎಸ್ಪಿ ಮಂಗಲ್ ಸಿಂಗ್ ಜಮುದಾ, ಎನ್ಟಿಪಿಸಿ ಸಹಾಯಕ ಇಂಜಿನಿಯರ್ ಶರ್ಬತ್ ಹುಸೇನ್ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಹಳಿಯಿಂದ ಸುಮಾರು 15 ಮೀಟರ್ ದೂರದಲ್ಲಿ ಸ್ಫೋಟಕ್ಕೆ ಬಳಸಲಾದ ತಂತಿಗಳನ್ನು ಪೊಲೀಸರು ಪತ್ತೆ ಮಾಡಿದರು.

ಅಸ್ಸಾಂನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ನ್ಯಾಷನಲ್ ಸಂತಾಲ್ ಲಿಬರೇಶನ್ ಆರ್ಮಿಗೆ ಸೇರಿದ ಭಯೋತ್ಪಾದಕರು ಈ ಪ್ರದೇಶದಲ್ಲಿ ಸಕ್ರಿಯರಾಗಿದ್ದಾರೆ ಎಂದು ವರದಿಯಾಗಿದೆ. ಅವರ ಕೈವಾಡ ಇದೆಯೇ ಎಂಬ ದೃಷ್ಟಿಯಿಂದ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಅಮಿತ್ ಕುಮಾರ್ ತಿಳಿಸಿದ್ದಾರೆ. ಸ್ಫೋಟಕ್ಕೆ ಏನು ಬಳಸಲಾಗಿದೆ ಎಂಬುದನ್ನು ಕಂಡುಹಿಡಿಯಲು ಎಫ್‌ಎಸ್‌ಎಲ್ ತಂಡವನ್ನು ಕರೆಯಲಾಯಿತು. ಸದ್ಯದಲ್ಲೇ ಸಂಪೂರ್ಣ ಮಾಹಿತಿ ಹೊರಬೀಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page