Home ಹವಾಮಾನ ಮಳೆ ಅವಾಂತರ; ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್, ಬೆಂಗಳೂರಿನಲ್ಲಿ ಇಬ್ಬರ ಸಾವು

ಮಳೆ ಅವಾಂತರ; ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್, ಬೆಂಗಳೂರಿನಲ್ಲಿ ಇಬ್ಬರ ಸಾವು

0

ಮೇ 22 ರ ವರೆಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮೇ 21, 22 ರ ವರೆಗೂ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ತೀವ್ರ ಮಳೆಯಾಗಲಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ, ಹಾಗೂ ಮಿಂಚು, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿರುಸಿನ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ನೀರು ನುಗ್ಗುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸಬೇಕು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ವಿಪತ್ತು ನಿರ್ವಹಣೆಯ ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸಬೇಕು ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಡಳಿತ ತಿಳಿಸಿದೆ.

ಇತ್ತ ರಾಜಧಾನಿ ಬೆಂಗಳೂರಲ್ಲೂ ಮಳೆ ಅವಾಂತರ ಸೃಷ್ಟಿಸಿದೆ. ಬಿಟಿಎಂ ಲೇಔಟ್ ನ 2 ನೇ ಹಂತದ ಎನ್ ಎಸ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಮಧುವನ ಅಪಾರ್ಟ್ಮೆಂಟ್ನ ಬೇಸ್ಮೆಂಟ್ ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಾರ್ಟ್ಮೆಂಟ್ ನಿವಾಸಿ ಮನೋಹರ್ ಕಾಮತ್ ಹಾಗೂ ನೇಪಾಳ ಮೂಲದ 9 ವರ್ಷದ ಬಾಲಕ ದಿನೇಶ್ ದುರ್ಮರಣ ಹೊಂದಿದ್ದಾರೆ. ಮಳೆಯಿಂದ ಸಂಪೂರ್ಣವಾಗಿ ಅಪಾರ್ಟ್ಮೆಂಟಿನ ಬೇಸ್ಮೆಂಟ್ ಜಲಾವೃತವಾಗಿತ್ತು.

ಮೋಟಾರ್ ಮೂಲಕ ನೀರು ಹೊರಹಾಕಲು ಯತ್ನಿಸುತ್ತಿದ್ದಾಗ ಎಲೆಕ್ಟ್ರಿಕ್ ಶಾಕ್ ನಿಂದ ಮನೋಹರ್ ಕಾಮತ್ ಮತ್ತು ದಿನೇಶ್ ಸಾವನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಸದ್ಯ ಇಬ್ಬರ ಮೃತ ದೇಹಗಳನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಸದ್ಯ ಮಧುವನ ಅಪಾರ್ಟ್ಮೆಂಟ್ ಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ. ಸ್ಥಳಕ್ಕೆ ಮೈಕೋ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

You cannot copy content of this page

Exit mobile version